32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಮ್ಮಾಜಿ ಕೋಟ್ಯಾನ್, ಎನ್. ಪ್ರಭಾಕರ್ ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಆರೋಪಗಳು ಸತ್ಯಕ್ಕೆ ದೂರವಾದವು : ಸುಲ್ಕೇರಿಮೊಗ್ರು ಪ್ರಾ.ಕೃ.ಪ. ಸ.ಸಂಘದ ಅಧ್ಯಕ್ಷ ಸುಧೀರ್ ಆರ್. ಸುವರ್ಣರಿಂದ ಸ್ಪಷ್ಟನೆ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ಅಮ್ಮಾಜಿ ಕೋಟ್ಯಾನ್ ಹಾಗೂ ನಿವೃತ್ತ ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಪ್ರಭಾಕರ್ ಅವರು ನಡೆಸುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಮಾಡಲಾಗುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಸಂಘದ ಅಧ್ಯಕ್ಷ ಸುಧೀರ್ ಆರ್. ಸುವರ್ಣ ಸ್ಪಷ್ಟಪಡಿಸಿದ್ದಾರೆ.

ಸುದ್ದಿ ಉದಯ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಪಿಎಫ್ ಹಾಗೂ ರಜೆ ಸಂಬಳ ನೀಡದಿರುವುದಕ್ಕೆ ಸಂಘದ ವತಿಯಿಂದ ಯಾವುದೇ ಉದ್ದೇಶಪೂರ್ವಕ ವಿಳಂಬ ಮಾಡಲಾಗಿಲ್ಲ. ನೂತನ ಸಿಇಒ ಅವರಿಗೆ ನಿವೃತ್ತ ಸಿಇಒ ಅಮ್ಮಾಜಿ ಕೋಟ್ಯಾನ್ ಅವರು ಅಗತ್ಯ ದಾಖಲೆಗಳು ಹಾಗೂ ಅಧಿಕಾರವನ್ನು ಸಮರ್ಪಕವಾಗಿ ಹಸ್ತಾಂತರ ಮಾಡದಿರುವುದರಿಂದ ಕೆಲವು ಪ್ರಕ್ರಿಯೆಗಳಲ್ಲಿ ವಿಳಂಬವಾಗಿದೆ ಎಂದು ತಿಳಿಸಿದರು.

ಗ್ರಾಚ್ಯೂಟಿ ಮೊತ್ತವನ್ನು ಸಂಘದ ವತಿಯಿಂದ ನೇರವಾಗಿ ಪಾವತಿಸುವ ವ್ಯವಸ್ಥೆ ಇರುವುದಿಲ್ಲ. ಎಲ್‌ಐಸಿ ಕಚೇರಿಯಿಂದ ಗ್ರಾಚ್ಯೂಟಿ ಮೊತ್ತ ಬಂದ ಬಳಿಕ ಅದನ್ನು ಸಂಬಂಧಪಟ್ಟವರಿಗೆ ನೀಡಲಾಗುತ್ತದೆ. ಆದರೆ ಈ ಪ್ರಕ್ರಿಯೆಗೆ ಅಗತ್ಯವಿರುವ ಪೂರಕ ದಾಖಲೆಗಳನ್ನು ಅಮ್ಮಾಜಿ ಕೋಟ್ಯಾನ್ ಅವರು ಸಲ್ಲಿಸಿಲ್ಲ ಎಂದು ಅಧ್ಯಕ್ಷರು ಆರೋಪಿಸಿದರು.

ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಎನ್. ಪ್ರಭಾಕರ್ ಅವರು ಫೆಬ್ರವರಿ ತಿಂಗಳಲ್ಲಿ ನಿವೃತ್ತರಾಗಿದ್ದಾರೆ. ಆ ಸಂದರ್ಭದಲ್ಲಿ ಅಮ್ಮಾಜಿ ಕೋಟ್ಯಾನ್ ಅವರು ಸಂಘದ ಸಿಇಒ ಆಗಿದ್ದರು. ನಿವೃತ್ತಿಯ ಸಂದರ್ಭದಲ್ಲಿ ಪ್ರಭಾಕರ್ ಅವರಿಗೆ ದೊರೆಯಬೇಕಾದ ಸೌಲಭ್ಯಗಳಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಸಿಇಒ ಆಗಿದ್ದ ಅಮ್ಮಾಜಿ ಕೋಟ್ಯಾನ್ ಅವರು ಸಿದ್ಧಪಡಿಸಬೇಕಾಗಿತ್ತು. ಅದು ಅವರ ಜವಾಬ್ದಾರಿಯಾಗಿತ್ತು ಎಂದು ಸುಧೀರ್ ಆರ್. ಸುವರ್ಣ ಹೇಳಿದರು.

ಯಾರಿಗೆ ಯಾವ ಸೌಲಭ್ಯ, ಭತ್ಯೆ ಹಾಗೂ ನಿವೃತ್ತಿ ಸೌಲಭ್ಯಗಳು ಕಾನೂನುಬದ್ಧವಾಗಿ ದೊರೆಯಬೇಕೋ ಅವುಗಳನ್ನು ನೀಡಲು ಸಂಘ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಹಾಗೂ ನಿಯಮಾನುಸಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಅಮ್ಮಾಜಿ ಕೋಟ್ಯಾನ್ ಹಾಗೂ ಎನ್. ಪ್ರಭಾಕರ್ ಅವರು ನಡೆಸುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಮಾಡಲಾಗುತ್ತಿರುವ ಆರೋಪಗಳು ವಾಸ್ತವಾಂಶಕ್ಕೆ ವಿರುದ್ಧವಾಗಿವೆ ಎಂದು ಅವರು ಸ್ಪಷ್ಟಪಡಿಸಿದರು.

Related posts

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!