ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಣಿಯೂರು ವಲಯದ ಮೈರೋಳಡ್ಕ ಒಕ್ಕೂಟದ ವತಿಯಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ಸೆ. 9 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಶಾಲೆಯ ಅಡಿಕೆ ತೋಟ ಮತ್ತು ಶಾಲೆಯ ಮೈದಾನ ಮತ್ತು ಶಾಲೆಯ ಸುತ್ತಮುತ್ತ ಗಿಡಗಂಟಿಯನ್ನು ಕಡಿದು ಸ್ವಚ್ಛಗೊಳಿಸಲಾಯಿತು.
ಶ್ರಮದಾನದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ಗೌರವಾಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಶ್ರೀಮತಿ ಚಂದ್ರಕಲಾ, ಒಕ್ಕೂಟದ ಸದಸ್ಯರು ಹಾಗೂ ಶಾಲಾ ಪೋಷಕ ವೃಂದದವರು ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಶ್ರಮದಾನದ ಸೇವಾ ಕಾರ್ಯದಲ್ಲಿ ಭಾಗವಹಿಸಿದವರೆಲ್ಲರಿಗೂ ಧನ್ಯವಾದ ಸಲ್ಲಿಸಿದರು.












