32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಎದುರು ನಿವೃತ್ತ ಸಿಇಒ, ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ಧರಣಿ

ಶಿರ್ಲಾಲು: ನಿವೃತ್ತಿಯ ಸಂದರ್ಭದಲ್ಲಿ ದೊರೆಯಬೇಕಾದ ಪಿಎಫ್, ಗ್ರಾಚ್ಯೂಟಿ ಹಾಗೂ ಗಳಿಕೆ ರಜೆಯ ಸಂಬಳವನ್ನು ನೀಡಿಲ್ಲ ಎಂದು ಆರೋಪಿಸಿ ನಿವೃತ್ತ ಸಿಇಒ ಅಮ್ಮಾಜಿ ಕೋಟ್ಯಾನ್ ಹಾಗೂ ನಿವೃತ್ತ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಪ್ರಭಾಕರ್ ಅವರು ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿ ಎದುರು ನ್ಯಾಯಕ್ಕಾಗಿ ಶಾಂತಿಯುತ ಧರಣಿ ಸತ್ಯಾಗ್ರಹವನ್ನು ಸೆ 10ರಂದು ನಡೆಸಿದರು.

ಮಿದುಳಿನ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಅಮ್ಮಾಜಿ ಕೋಟ್ಯಾನ್ ಅವರು, ತಮ್ಮ ನಿವೃತ್ತಿಯ ಬಳಿಕ ಸಿಗಬೇಕಾದ ಹಣವನ್ನು ಬಿಡುಗಡೆ ಮಾಡಬೇಕು. ಜೀವನಪೂರ್ತಿ ದುಡಿದು ಗಳಿಸಿದ ಹಣಕ್ಕಾಗಿ ಇದೀಗ ಧರಣಿ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅದೇ ರೀತಿ ನಿವೃತ್ತ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಪ್ರಭಾಕರ್ ಅವರು ಹೃದಯದ ತೆರೆದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿವೃತ್ತಿಯ ಬಳಿಕ ತಮಗೆ ದೊರೆಯಬೇಕಾದ ಗ್ರಾಚ್ಯೂಟಿ, ಗಳಿಕೆ ರಜೆಯ ಸಂಬಳ ಹಾಗೂ ಎರಡು ವರ್ಷಗಳ ರಜೆ ವೇತನ ಸೇರಿದಂತೆ ಬಾಕಿ ಇರುವ ಹಣವನ್ನು ನೀಡದೆ ಆಡಳಿತ ಮಂಡಳಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ, ನ್ಯಾಯಕ್ಕಾಗಿ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿದರು.

ತಮಗೆ ಕಾನೂನುಬದ್ಧವಾಗಿ ದೊರೆಯಬೇಕಾದ ನಿವೃತ್ತಿ ಸೌಲಭ್ಯ ಹಾಗೂ ಬಾಕಿ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಆಡಳಿತ ಮಂಡಳಿಯನ್ನು ಅವರು ಆಗ್ರಹಿಸಿದರು.

Related posts

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ಕುವೆಟ್ಟು: ಮಹಮ್ಮಾಯಿ ದೇವಿಯ ಮಾರಿ ಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕುರಿತು ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!