ಬೆಳ್ತಂಗಡಿ: ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ ಗ್ರಾಮದ 8 ಅಂಗನವಾಡಿ ಕೇಂದ್ರಗಳ 138 ಮಕ್ಕಳು ಹಾಗೂ ಸ್ಥಳೀಯ ಶಾಲೆಯ 67 ಮಕ್ಕಳು ಸೇರಿದಂತೆ ಒಟ್ಟು 205 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ನಡ ಸರಕಾರಿ ಕಾಲೇಜಿನ ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ನಾಲ್ವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಸೆ.9ರಂದು ನಡೆಯಿತು.
ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯ ಗುತ್ತು ಅವರು ಮಕ್ಕಳಿಗೆ ಸಮವಸ್ತ್ರ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ. ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.












