32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14-16: ಉಜಿರೆಯಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಉಜಿರೆ: ಉಜಿರೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಶಾರದಾ ಮಂಟಪದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.14ರಿಂದ 16ರವರೆಗೆ ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ.14ರಂದು ಬೆಳಿಗ್ಗೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಗಣಪತಿ ಹವನ, ಶ್ರೀ ಗಣಪತಿ ಮೂರ್ತಿ ಪ್ರತಿಷ್ಠೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಸಂಪತ್ ರತ್ನ ರಾವ್ ಮತ್ತು ಶಿವಶಂಕರ ಕುಡ್ವ ಉಪಸ್ಥಿತರಿರುವರು. ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗಾಗಿ ಭಕ್ತಿಗೀತೆ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ರಂಗವಲ್ಲಿ ಸ್ಪರ್ಧೆ, ಹಗ್ಗ ಜಗ್ಗಾಟ ಸ್ಪರ್ಧೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ.

ಸೆ.15ರಂದು ಬೆಳಿಗ್ಗೆ ಗಣಪತಿ ಹವನ, ವಿವಿಧ ಭಜನಾ ತಂಡಗಳಿAದ ಭಜನಾ ಕಾರ್ಯಕ್ರಮ, ಉಪ್ಪಿನಂಗಡಿಯ ಸ್ಕಂದ ಮ್ಯೂಸಿಕಲ್ ತಂಡದಿAದ ಭಕ್ತಿಗೀತೆ, ರಸಮಂಜರಿ ಹಾಗೂ ರಾತ್ರಿ ಆಯ್ದ ನೃತ್ಯ ತಂಡಗಳಿAದ “ನೃತ್ಯ ಝೇಂಕಾರ” ನೃತ್ಯ ಕಾರ್ಯಕ್ರಮ ನಡೆಯಲಿದೆ.

ಸೆ.16ರಂದು ಬೆಳಿಗ್ಗೆ ೧೦೮ ತೆಂಗಿನಕಾಯಿ ಗಣಪತಿ ಹವನ ಹಾಗೂ ಪೂರ್ಣಾಹುತಿ, ಅಪರಾಹ್ನ ಸಂತೋಷ್ ಆಚಾರ್ಯ ಅತ್ತಾಜೆ ಅವರಿಂದ ಭಕ್ತಿನಾದ ಜಾನಪದ ಗಾಯನ ಹಾಗೂ ಸಂಜೆ ಭಜನಾ ಕಾರ್ಯಕ್ರಮ ನಡೆಯಲಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರ ಗೌರವ ಉಪಸ್ಥಿತಿ, ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಅವರ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ನಡೆಯಲಿದೆ.


ಸಂಜೆ ಆಕರ್ಷಕ ಸ್ಥಬ್ಧ ಚಿತ್ರಗಳು, ಸುಡುಮದ್ದು ಪ್ರದರ್ಶನ ಹಾಗೂ ವಿವಿಧ ಭಜನಾ ತಂಡಗಳ ಕುಣಿತ ಭಜನೆಯೊಂದಿಗೆ ಶ್ರೀ ಮಹಾಗಣಪತಿ ದೇವರ ಶೋಭಾಯಾತ್ರೆ ನಗರದಲ್ಲಿ ಸಾಗಿಬಂದು ದೇವಸ್ಥಾನದ ಪುಷ್ಕರಣಿ ಕೆರೆಯಲ್ಲಿ ವಿಸರ್ಜಿಸಲ್ಪಡಲಿದೆ.

Related posts

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಅನುಗ್ರಹದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya
error: Content is protected !!