25.7 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿನಿಧನವರದಿ

ಪಿಡಿಒ ಪುರುಷೋತ್ತಮ್‌ರಿಗೆ ಮಾತೃ ವಿಯೋಗ

ಬೆಳ್ತಂಗಡಿ: ಗೇರುಕಟ್ಟೆ ನಿವಾಸಿ, ಚಂದಪ್ಪ ಪೂಜಾರಿ ಅವರ ಧರ್ಮಪತ್ನಿ ಕುಸುಮಾವತಿನ (75ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ.11ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ನಾಲ್ಕೂರು ಗ್ರಾಮದ ಬೊಕ್ಕಸಗುತ್ತು ಹಿರಿಯ ಸದಸ್ಯರಾಗಿದ್ದು, ಸಮಾಜದ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಸರಳ, ಸೌಮ್ಯ ಸ್ವಭಾವದವರಾಗಿದ್ದ ಅವರು ಕುಟುಂಬ ಹಾಗೂ ಸಮಾಜದೊಂದಿಗೆ ಆತ್ಮೀಯವಾಗಿ ಬೆರೆತು ಜೀವನ ನಡೆಸಿದ್ದರು.

ಮೃತರು ಮಕ್ಕಳಾದ ಚಾರ್ಮಾಡಿ ಹಾಗೂ ಪಡಂಗಡಿ ಗ್ರಾಮ ಪಂಚಾಯತ್ ಪಿಡಿಒ ಪುರುಷೋತ್ತಮ್, ಅಂಗನವಾಡಿ ಶಿಕ್ಷಕಿ ಭಾಗ್ಯವತಿ, ಲೋಲಾಕ್ಷಿ ಅವರನ್ನು ಅಗಲಿದ್ದಾರೆ. ಅಲ್ಲದೆ ಸಹೋದರರಾದ ಬೊಕ್ಕಸ ಸದಾನಂದ ಪೂಜಾರಿ, ನಾರಾಯಣ ಪೂಜಾರಿ, ಬೇಬಿ ಪೂಜಾರಿ, ಸಹೋದರಿ ಮೀನಾಕ್ಷಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya
error: Content is protected !!