32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ: ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಬೆಳ್ತಂಗಡಿ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಶಾಂತಿ ಸಭೆ ಸೆ. 11 ರಂದು ಠಾಣೆಯಲ್ಲಿ ಜರುಗಿತು.

ಬೆಳ್ತಂಗಡಿ ಇನ್ಸ್‌ಪೆಕ್ಟರ್ ರವಿ ಮತ್ತು ಸಬ್ ಇನ್ಸ್‌ಪೆಕ್ಟರ್ ಆನಂದ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಬೆಳ್ತಂಗಡಿ ವ್ಯಾಪ್ತಿಯಲ್ಲಿ ಈ ಬಾರಿ 25 ಕಡೆ ಗಣೇಶ ಚೌತಿ ಪ್ರತಿಷ್ಠಾಪನೆಯಾಗಲಿದ್ದು, 12 ಕಡೆ ವಿಸರ್ಜನಾ ಮೆರವಣಿಗೆ ನಡೆಯಲಿದೆ ಎಂದು ತಿಳಿಸಲಾಯಿತು.

ಪೊಲೀಸ್ ಇಲಾಖೆ ನೀಡಿದ ಪ್ರಮುಖ ಸೂಚನೆಗಳು:

ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಧ್ವನಿವರ್ಧಕ ಬಳಕೆಗೆ ಅವಕಾಶ, ಡಿಜೆ ಬಳಕೆ ಸಂಪೂರ್ಣ ನಿಷೇಧ, ಸುಪ್ರೀಂ ಕೋರ್ಟ್ ಆದೇಶ ಕಡ್ಡಾಯ ಪಾಲನೆ ಮಾಡಬೇಕು.

ಪ್ರತಿ ಗಣೇಶ ಮಂಟಪದಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಬೇಕು, ಬೆಳಗ್ಗೆ ಮತ್ತು ರಾತ್ರಿ ಕಾವಲುಗಾರರನ್ನು ನೇಮಿಸಬೇಕು.

ಸಮಿತಿಯವರೇ ಎಲ್ಲಾ ವಿಷಯಗಳಿಗೂ ಸಂಪೂರ್ಣ ಜವಾಬ್ದಾರಿ ಹೊರಬೇಕು. ಕಾರ್ಯಕ್ರಮಕ್ಕೆ ಜವಾಬ್ದಾರಿ ಮುಖ್ಯ, ನಿಯಮ ಪಾಲಿಸದಿದ್ದರೆ ಅನುಮತಿಯನ್ನು ನಿರಾಕರಿಸಲಾಗುವುದು.

ಧಾರ್ಮಿಕ ಕಾರ್ಯಕ್ರಮದ ಭಾಷಣದಲ್ಲಿ ಯಾವುದೇ ಗೊಂದಲ, ತೊಂದರೆ ಬಂದರೆ ಸಂಘಟಕರೇ ಜವಾಬ್ದಾರರು. ಧಾರ್ಮಿಕ ವಿಚಾರದ ಬಗ್ಗೆ ಮಾತ್ರ ಮಾತನಾಡಿ, ಧಾರ್ಮಿಕ ಉಪದೇಶ ನೀಡಬೇಕು.

ಬ್ಯಾನರ್ ಅಳವಡಿಕೆಗೆ ಪಂಚಾಯತ್ ಅನುಮತಿ ಕಡ್ಡಾಯ, ನಿಗದಿತ ಸಮಯಕ್ಕೆ ತೆರವುಗೊಳಿಸಬೇಕು. ಬ್ಯಾನರ್‌ನಲ್ಲಿ ಪ್ರಚೋದನಕಾರಿ ವಿಷಯ ಇರಬಾರದು.

ಮೆರವಣಿಗೆಯನ್ನು ಬೇಗನೆ ಶುರುಮಾಡಿ ನಿಗದಿತ ಸಮಯಕ್ಕೆ ಮುಗಿಸಬೇಕು, ಕಾನೂನು ಪಾಲಿಸಬೇಕು. ಮೆರವಣಿಗೆ ಶಾಂತ ರೀತಿಯಲ್ಲಿ ರಸ್ತೆ ಬದಿಯಲ್ಲಿ ಸಾಗಬೇಕು, ಸಾರ್ವಜನಿಕರಿಗೆ ತೊಂದರೆಯಾಗಬಾರದು.

ಮೆರವಣಿಗೆಯಲ್ಲಿ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರ ವಹಿಸಬೇಕು. ವಿಸರ್ಜನಾ ಸ್ಥಳದಲ್ಲಿ ಲೈಟ್ ವ್ಯವಸ್ಥೆ ಮಾಡಬೇಕು, ನದಿಯಲ್ಲಿ ಈಜು ಬಲ್ಲವರನ್ನು ಮಾತ್ರ ನೀರಿಗೆ ಇಳಿಸಬೇಕು.

ಪೊಲೀಸ್ ಸಿಬ್ಬಂದಿ ಜೊತೆ ಜಗಳ, ವಾಗ್ವಾದ ನಡೆಸಿದರೆ ಸಂಘಟಕರೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಲಾಯಿತು.

ಸಭೆಯಲ್ಲಿ ಬೆಳ್ತಂಗಡಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya
error: Content is protected !!