32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಹಿಳೆಯರಿಗಾಗಿ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಉಜಿರೆ : ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್, ಉಜಿರೆ ಮತ್ತು ಶ್ರೀ ದುರ್ಗಾಮಾತೃ ಮಂಡಳಿ, ಕನ್ಯಾಡಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 38 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಸೆ. 10 ರಂದು ಸಂಜೀವಿನಿ ಕಟ್ಟಡ ಗ್ರಾಮ ಪಂಚಾಯತ್ ಉಜಿರೆಯಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ರಘುರಾಮ ಶೆಟ್ಟಿ ”ಸಾಧನಾ'” ರವರು ಶಿಬಿರಕ್ಕೆ ಚಾಲನೆ ನೀಡಿ, ಟೈಲರಿಂಗ್ ತರಬೇತಿಯು ಕೇವಲ ಕಲೆ ಮಾತ್ರವಲ್ಲ, ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣದ ಉತ್ತಮ ಅವಕಾಶವಾಗಿದೆ. ಈ ತರಬೇತಿಯ ಮೂಲಕ ಹೊಸ ಕೌಶಲ್ಯಗಳನ್ನು ಕಲಿತು ಸ್ವಾವಲಂಬಿಗಳಾಗುವಂತೆ ಶುಭಹಾರೈಸಿದರು.

ಸೇವಾಭಾರತಿ ಅಧ್ಯಕ್ಷರಾದ ಹಾಗೂ ಸೇವಾಧಾಮ ಸಂಸ್ಥಾಪಕರಾದ ಕೆ ವಿನಾಯಕ ರಾವ್ ರವರು ಯಶಸ್ಸಿಗೆ ದೊಡ್ಡ ಅವಕಾಶಗಳಿಗಿಂತ ಕಲಿಯುವ ಮನಸ್ಸು ಮತ್ತು ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ ಮುಖ್ಯ. ಆದ್ದರಿಂದ ಈ ತರಬೇತಿಯನ್ನು ಉತ್ತಮ ಅವಕಾಶವಾಗಿ ಸ್ವೀಕರಿಸಿ ಎಂದು ಅಧ್ಯಕ್ಷರ ನುಡಿಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪ್ರಕಾಶ್ ಶೆಟ್ಟಿ,ಮಹಿಳೆಯರು ಸ್ವಾವಲಂಬನೆ ಮತ್ತು ಉದ್ಯಮಶೀಲರಾಗಲು ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಿದ್ದೇವೆ ಮುಂದೆಯೂ ಸದಾ ನನ್ನ ಬೆಂಬಲವಿದೆ ಎಂದು ಶುಭ ಹಾರೈಸಿದರು.

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಅಧ್ಯಕ್ಷೆ ವಿನುತಾ ರಜತ್ ಗೌಡ, ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಗ್ರಾಮ ಪಂಚಯಾತ್ ಮಾಜಿ ಅಧ್ಯಕ್ಷರು ಪುಷ್ಪವತಿ, ಬೆಳ್ತಂಗಡಿ ತಾಲೂಕು ಕೃಷಿಯೇತರ ವ್ಯವಸ್ಥಾಪಕರಾದ ನಿತೀಶ್ ಉಜಿರೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಬಿ, ಟೈಲರಿಂಗ್ ತರಬೇತುದಾರರಾದ ಲಲಿತ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 66 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಶಾಶ್ವಿತ ಸ್ವಾಗತಿಸಿ, ಸಂಧ್ಯಾ ನಿರೂಪಿಸಿ, ಭಾಗೀರಥಿ ಧನ್ಯವಾದವಿತ್ತರು.

Related posts

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya
error: Content is protected !!