28.3 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜದಲ್ಲಿ ವಿದ್ಯುತ್ ಶಾಕ್‌ಗೆ ಕಾರ್ಮಿಕ ಬಲಿ

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ಶುಕ್ರವಾರ ಸಂಜೆ ನಡೆದಿದೆ.ಮೃತರನ್ನು ಬಂದಾರು ನಿವಾಸಿ ಜಯಪ್ರಕಾಶ್ (38) ಎಂದು ಗುರುತಿಸಲಾಗಿದೆ.

ಪದ್ಮುಂಜದಲ್ಲಿರುವ ಮರದ ಮಿಲ್‌ನಲ್ಲಿ ಜಯಪ್ರಕಾಶ್ ಅವರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸಹ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಜಯಪ್ರಕಾಶ್ ಅವರ ಸ್ಥಿತಿ ಗಂಭೀರವಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.ವಿದ್ಯುತ್ ಆಘಾತದಿಂದ ಸಂಭವಿಸಿದ ಈ ದುರ್ಘಟನೆಯಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆಘಾತ ಮತ್ತು ದುಃಖ ಆವರಿಸಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

Related posts

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya
error: Content is protected !!