ಬೆಳ್ತಂಗಡಿ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಶಿಕ್ಷಕರ ದಿನಾಚರಣೆ ಸೆ. 7 ರಂದು ಅಚ್ಚಿನಡ್ಕ ಸಂಘದ ಸಭಾಭವನದಲ್ಲಿ ಆಚರಿಸಲಾಯಿತು.
ಈ ವೇಳೆ ಮೂವರು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿಲಾಯಿತು . ಯಕ್ಷಗಾನ ಕಲೆಯನ್ನು ಕರಗತ ಮಾಡಿಕೊಂಡಿರುವ ಶ್ರೇಷ್ಠ ವಿದ್ವಾನ್ ನಿವೃತ್ತ ಶಿಕ್ಷಕ ಮೂಡಂಬೈಲ್ ಗೋಪಾಲ ಕೃಷ್ಣ ಶಾಸ್ತ್ರಿಗಳ ಉಪಸ್ಥಿತರಿದ್ದರು.
ಅಧ್ಯಕ್ಷರಾದ ವಿಠಲ್ ಶೆಟ್ಟಿ ತ್ರಿಪದಿಕವಿ ಸರ್ವಜ್ಞನ ಅದ್ಭುತ ವಚನ ಸ್ವರ್ಗಕ್ಕೆ ಕಿಚ್ಚು ಹಚ್ಚೆನ್ದ ಎಂಬ ತ್ರಿಪದಿ ಯನ್ನು ವಿವರಿಸಿ ಸಭೆಯು ನಗೆಗಡಲಲ್ಲಿ ತೇಲುವಂತೆ ಮಾಡಿದರು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಸಭೆಯಲ್ಲಿ ಅತಿಥಿಗಳನ್ನು ಶಾಲು ಹೊದಿಸಿ ಹಾರ ಹಾಕಿ ಫಲ ಪುಷ್ಪ ನೀಡಿ ಗೌರವಿಸಲಾಯಿತು. ಯಶೋಧ ರವರು ಸರ್ವಪಲ್ಲಿ ರಾಧಾಕೃಷ್ಣನ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು.
ಅಗಲಿದ ಸದಸ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಅಣ್ಣಿ ಗೌಡರ ಪ್ರಾರ್ಥಿಸಿ, ಕಾರ್ಯದರ್ಶಿ ವಿಶ್ವಾಸ ರಾವ್ ಸ್ವಾಗತಿಸಿ, ವಂದಿಸಿದರು.












