30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಶಿಕ್ಷಕರ ದಿನಾಚರಣೆ : ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಶಿಕ್ಷಕರ ದಿನಾಚರಣೆ ಸೆ. 7 ರಂದು ಅಚ್ಚಿನಡ್ಕ ಸಂಘದ ಸಭಾಭವನದಲ್ಲಿ ಆಚರಿಸಲಾಯಿತು.

ಈ ವೇಳೆ ಮೂವರು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿಲಾಯಿತು . ಯಕ್ಷಗಾನ ಕಲೆಯನ್ನು ಕರಗತ ಮಾಡಿಕೊಂಡಿರುವ ಶ್ರೇಷ್ಠ ವಿದ್ವಾನ್ ನಿವೃತ್ತ ಶಿಕ್ಷಕ ಮೂಡಂಬೈಲ್ ಗೋಪಾಲ ಕೃಷ್ಣ ಶಾಸ್ತ್ರಿಗಳ ಉಪಸ್ಥಿತರಿದ್ದರು.

ಅಧ್ಯಕ್ಷರಾದ ವಿಠಲ್ ಶೆಟ್ಟಿ ತ್ರಿಪದಿಕವಿ ಸರ್ವಜ್ಞನ ಅದ್ಭುತ ವಚನ ಸ್ವರ್ಗಕ್ಕೆ ಕಿಚ್ಚು ಹಚ್ಚೆನ್ದ ಎಂಬ ತ್ರಿಪದಿ ಯನ್ನು ವಿವರಿಸಿ ಸಭೆಯು ನಗೆಗಡಲಲ್ಲಿ ತೇಲುವಂತೆ ಮಾಡಿದರು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಸಭೆಯಲ್ಲಿ ಅತಿಥಿಗಳನ್ನು ಶಾಲು ಹೊದಿಸಿ ಹಾರ ಹಾಕಿ ಫಲ ಪುಷ್ಪ ನೀಡಿ ಗೌರವಿಸಲಾಯಿತು. ಯಶೋಧ ರವರು ಸರ್ವಪಲ್ಲಿ ರಾಧಾಕೃಷ್ಣನ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು.


ಅಗಲಿದ ಸದಸ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಅಣ್ಣಿ ಗೌಡರ ಪ್ರಾರ್ಥಿಸಿ, ಕಾರ್ಯದರ್ಶಿ ವಿಶ್ವಾಸ ರಾವ್ ಸ್ವಾಗತಿಸಿ, ವಂದಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬೋಧಕ ಸಿಬ್ಬಂದಿಗಳಿಗೆ “ಬೋಧನಾ ಶಿಕ್ಷಕರ ಸಬಲೀಕರಣ” ಕಾರ್ಯಾಗಾರ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya
error: Content is protected !!