30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆಯ ಕುರಿತು ಸಂವಾದ ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ “ಪ್ರಥಮ ಚಿಕಿತ್ಸೆಯ ಮೂಲಭೂತ ಅಂಶಗಳು” ವಿಷಯದ ಕುರಿತು ಸಂವಾದ ಕಾರ್ಯಕ್ರಮವು ಸೆ. 10ರಂದು ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು.

ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಉಪನ್ಯಾಸಕ ಅವನೀಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆಯ ಮಹತ್ವ, ಕೈಗೊಳ್ಳಬೇಕಾದ ಪ್ರಾಥಮಿಕ ಕ್ರಮಗಳು ಹಾಗೂ ಅಪಘಾತ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ವಿದ್ಯಾರ್ಥಿಗಳು ವಹಿಸಬೇಕಾದ ಜವಾಬ್ದಾರಿಗಳ ಕುರಿತು ಪ್ರಾಯೋಗಿಕ ಹಾಗೂ ಉಪಯುಕ್ತ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಸಿಂಚನಾ ಎಂ.ಸಿ. ನೆರವೇರಿಸಿದರು.

ಕುಮಾರಿ ರುಶಿಕಾ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ ಅನುರಾಧಾ ಕೆ. ರಾವ್, ಜೂನಿಯರ್ ರೆಡ್ ಕ್ರಾಸ್ ಘಟಕದ ಸಂಯೋಜಕಿ, ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು.


ಕಾರ್ಯಕ್ರಮದ ಕುರಿತು ವಿದ್ಯಾರ್ಥಿಗಳಾದ ಅರೇಲ್ ರಿಷಾ ರೋಡ್ರಿಗಸ್ ಹಾಗೂ ಸಂಭ್ರಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಜೂನಿಯರ್ ರೆಡ್ ಕ್ರಾಸ್ ಘಟಕದ ಯೂನಿಟ್ ಲೀಡರ್ ಮನೀಶ್ ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಜೂನಿಯರ್ ರೆಡ್ ಕ್ರಾಸ್ ಘಟಕದ ಸಂಯೋಜಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya
error: Content is protected !!