ಬೆಳ್ತಂಗಡಿ: ರಾಜ್ಯಾದ್ಯಂತ ಪ್ರತೀ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತೀ ತಿಂಗಳ ಎಲ್ಲಾ ಶನಿವಾರದಂದು ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲು ಸರಕಾರ ಸೂಚಿಸಲಾಗಿರುತ್ತದೆ.
ಬೆಳ್ತಂಗಡಿ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ ಸಭೆಯನ್ನು ಸೆ.12 ರಂದು ಪೂರ್ವಹ್ನ 11:00 ಗಂಟೆಗೆ ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ಭವನ, ಕೊಕ್ಕಡ ಇಲ್ಲಿ ಆಯೋಜಿಸಲಾಗಿರುತ್ತದೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ತಿಳಿಸಲಾಗಿದೆ.












