ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ಮುಂಡೂರುನ ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 12 ನೇ ವರ್ಷದ ಶ್ರೀ ಗಣೇಶೋತ್ಸವ ಹಾಗೂ ೧೦೮ ತೆಂಗಿನಕಾಯಿ ಗಣಯಾಗ ಸೆ.೧೪ರಂದು ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ರಾಜೀವ್ ಅವರು ತಿಳಿಸಿದ್ದಾರೆ.
ಸೆ.14 ಬೆಳಿಗ್ಗೆ ಗಂಟೆ 8ಕ್ಕೆ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಬಳಿಕ 108 ತೆಂಗಿನಕಾಯಿ ಗಣಯಾಗ ಪ್ರಾರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಗಂಟೆ ೭ಕ್ಕೆ ನಾಗಾಂಬಿಕಾ ಭಜನಾ ಮಂಡಳಿಯವರಿAದ ಕುಣಿತ ಭಜನೆ, ರಾತ್ರಿ ಗಣಪತಿ ದೇವರಿಗೆ ರಂಗ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ರಾತ್ರಿ ಗಣಪತಿ ದೇವರ ವಿಗ್ರಹ ಜಲಸ್ತಂಭನ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.












