30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಿ ವರ್ಕ್ ತರಬೇತಿ ಪಡೆದ ಮಹಿಳೆಯರು ಸ್ವಾವಲಂಬಿಗಳಾಗಲಿ: ಜ್ಯೋತಿರಾಜ್

ಅಂಡಿಂಜೆ: ಗ್ರಾಮೀಣ ಭಾಗದ ಮಹಿಳೆಯರು ತಮ್ಮಲ್ಲಿರುವ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.), ಮಂಗಳೂರು ಇದರ ಸಿಇಒ ಜ್ಯೋತಿರಾಜ್ ಹೇಳಿದರು.

ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.), ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.), ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 15 ದಿನಗಳ ಆರಿ ವರ್ಕ್ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಅಂಡಿಂಜೆ ಸಹಯೋಗದಲ್ಲಿ ನಡೆದ ತರಬೇತಿ ಕಾರ್ಯಾಗಾರವು ಮಹಿಳೆಯರಿಗೆ ಆರಿ ವರ್ಕ್ ಕಲೆಯ ಕುರಿತು ಪ್ರಾಯೋಗಿಕ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ಸುದರ್ಶಿನಿ ಹೆಗ್ಡೆ ವಹಿಸಿದ್ದರು. ಶಿಬಿರಾರ್ಥಿಗಳು ತರಬೇತಿಯ ಅನುಭವ ಹಾಗೂ ಅನಿಸಿಕೆಗಳನ್ನು ಹಂಚಿಕೊಂಡರು.

ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ, ತಾಲೂಕು ಕೃಷಿಯೇತರ ವ್ಯವಸ್ಥಾಪಕರಾದ ನಿತೀಶ್, ಸಂಪನ್ಮೂಲ ವ್ಯಕ್ತಿ ಶ್ರೀಮತಿ ಶುಭಲಕ್ಷ್ಮಿ ಹಾಗೂ ತರಬೇತುದಾರರಾದ ನಿಶ್ಚಿಂತ ಜೈನ್ ಅವರು ಮಾತನಾಡಿ, ತರಬೇತಿಯ ಮೂಲಕ ಪಡೆದ ಕೌಶಲ್ಯವನ್ನು ಜೀವನೋಪಾಯದ ಚಟುವಟಿಕೆಯಾಗಿ ರೂಪಿಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಜೀವನೋಪಾಯ ಚಟುವಟಿಕೆಗಳಿಗೆ ಸಂಬಂಧಿಸಿದ ಬ್ಯಾಂಕ್ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಲಾಯಿತು. ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಅಕ್ಷತ ಕಾರ್ಯಕ್ರಮ ನಿರೂಪಿಸಿದರು. ವಿಂಧ್ಯ ಮತ್ತು ತಂಡದವರು ಪ್ರಾರ್ಥನೆ ನೆರವೇರಿಸಿದರು. ನಮಿತಾ ಸ್ವಾಗತಿಸಿದರು. ಯಶವಂತಿ ಧನ್ಯವಾದ ಸಮರ್ಪಿಸಿದರು.

Related posts

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಒಕ್ಕೂಟದ ಸಭೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya
error: Content is protected !!