30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.13-15: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ವಾಣಿಜ್ಯ ಸಂಕೀರ್ಣದಲ್ಲಿ 16ನೇ ವರ್ಷದ ಸಾರ್ವಜನಿಕ ಗೌರಿ ಗಣೇಶೋತ್ಸವ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಸೆ. 13ರಿಂದ 15ರವರೆಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯನ್ ಸಭಾಭವನದಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೆ. 13ರಂದು ಬೆಳಿಗ್ಗೆ 9ಕ್ಕೆ ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಶ್ರೀ ಗೌರಿ ಗಣೇಶೋತ್ಸವದ ಉದ್ಘಾಟನೆ ಮತ್ತು ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ.

ಮಧ್ಯಾಹ್ನ ಗಂಟೆಗೆ ಸಾರ್ವಜನಿಕರಿಗೆ ಕುಣಿತ ಭಜನಾ ಸ್ಪರ್ಧೆ ನಡೆಯಲಿದ್ದು ಭಜನಾ ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳಿಗೆ ನಗದು ಮತ್ತು ಪ್ರಥಮ ಹಾಗೂ ದ್ವಿತೀಯ ವಿಜೇತ ತಂಡಗಳಿಗೆ ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು.

ಸೆ. 14ರಂದು ವಿವಿಧ ಭಜನಾ ತಂಡಗಳಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 3 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಕುಣಿತ ಭಜನಾ ಸ್ಪರ್ಧೆ ಜರಗಲಿದೆ. ಸೆ. 15ರಂದು ಬೆಳಿಗ್ಗೆ 108 ಕಾಯಿ ಗಣಹೋಮ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 3:30ರಿಂದ ವಿವಿಧ ತಂಡಗಳಿಂದ ಕಲಾ ಪ್ರದರ್ಶನ, ಸಂಜೆ ಸಂಧ್ಯಾ ಪೂಜೆ, ವಿಸರ್ಜನಾ ಪೂಜೆ, ಪ್ರಾರ್ಥನೆ, ಶೋಭಾ ಯಾತ್ರೆ ಜರಗಲಿದೆ. ಶೋಭಾಯಾತ್ರೆಯಲ್ಲಿ ಮಂಗಳೂರಿನ ಆಕರ್ಷಕ ಟ್ಯಾಬೋ, ಸೃಷ್ಟಿ ಆರ್ಟ್ ಗುರುವಾಯನಕೆರೆ ಗೊಂಬೆ ಬಳಗದ ಕೀಲು ಕುದುರೆ, ಬ್ಯಾಂಡ್ ಸೆಟ್, ನಾಸಿಕ್ ಬ್ಯಾಂಡ್, ಸುಡು ಮದ್ದು ಪ್ರದರ್ಶನ ಹಾಗೂ ಅನೇಕ ಕಲಾತಂಡಗಳು ಭಾಗವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya
error: Content is protected !!