27.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಬೀಳ್ಕೊಡುಗೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ಕಳೆದ 10 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಇದೀಗ ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡಿರುವ ಶ್ರೀ ಪರಮೇಶ್ವರ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಅವರನ್ನು ಶಾಲೆಯ ವತಿಯಿಂದ ಫಲ-ತಾಂಬೂಲ ನೀಡಿ, ಪೇಟ ತೊಡಿಸಿ ಹಾಗೂ ಸ್ಮರಣಿಕೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಶಿಕ್ಷಕರಾದ ಶ್ರೀ ಮೋನಪ್ಪ ಗೌಡ ಅವರು ಸನ್ಮಾನಿತರ ಕಿರು ಪರಿಚಯವನ್ನು ಮಾಡಿಕೊಟ್ಟರು.

ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಪರಮೇಶ್ವರ್ ಅವರು, “ನಾನು ಇದೇ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, ಇದೇ ಶಾಲೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನ್ನ ಭಾಗ್ಯ. ಶಾಲೆಯೊಂದಿಗೆ ಹೊಂದಿರುವ ಆತ್ಮೀಯ ಸಂಬಂಧವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತೇನೆ” ಎಂದು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, 2006ನೇ ಸಾಲಿನ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya
error: Content is protected !!