30.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಉಚಿತ ಗುರುತಿನ ಚೀಟಿ ವಿತರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಶಾಲಾ ಮಕ್ಕಳಿಗೆ ಉಚಿತ ಗುರುತಿನ ಚೀಟಿ ವಿತರಣಾ ಸಮಾರಂಭವು ಸೆ.11 ರಂದು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಕೊಡುಗೈ ದಾನಿಗಳೂ, ಸಮಾಜ ಸೇವಕರೂ, ಮಂಜುನಾಥ ಸ್ವಾಮಿ ದೇವಸ್ಥಾನದ ಪಾರುಪತ್ಯಗಾರರೂ ಆದ ಲಕ್ಷ್ಮೀನಾರಾಯಣ ರಾವ್ ಇವರು ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಗುರುತಿನ ಚೀಟಿಯನ್ನು ಪ್ರತಿ ವರ್ಷ ಕೊಡುತ್ತಾ ಬರುತ್ತಿದ್ದು ಈ ವರ್ಷವೂ ಕೂಡ ವಿತರಣೆ ಮಾಡಿ ‘ಮಕ್ಕಳು ಬಾಲ್ಯದಿಂದಲೇ ಜವಾಬ್ದಾರಿಯುತವಾಗಿ ತಮ್ಮ ತಮ್ಮ ಕೆಲಸಗಳನ್ನು ನಿರ್ವಹಿಸುತ್ತಾ ಬಂದರೆ ಮುಂದೆ ಒಳ್ಳೆಯ ಸ್ಥಾನಕ್ಕೆ ಹೋಗಲು ಸಾಧ್ಯವಾಗುತ್ತದೆ’ ಎಂದು ಕಿವಿಮಾತು ನೀಡಿದರು.

ಎಸ್‌.ಡಿಎಂ ಡಿ.ಎಡ್ ಕಾಲೇಜಿನ ಪ್ರಾಧ್ಯಾಪಕರಾದ ಮಂಜು ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಸಮಾಜ ಸೇವೆಯನ್ನು ಮಾಡುತ್ತಾ ಬಂದಿರುವ ಶ್ರೀಯುತರು ನಮ್ಮ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಶಾಲೆಯ ಮೇಲೆ ಅಪಾರ ಅಭಿಮಾನವನ್ನು ಹೊಂದಿರುತ್ತಾರೆ. ಇವರ ಈ ಸೇವೆಗೆ ನಾವೆಲ್ಲರೂ ಚಿರಋಣಿಗಳಾಗಿದ್ದೇವೆ ಎಂದರು.

ಶಾಲಾ ಶಿಕ್ಷಕ ಜೋಸೆಫ್ ಸ್ವಾಗತಿಸಿದ ಈ ಕಾರ್ಯಕ್ರಮಕ್ಕೆ ಶಿಕ್ಷಕಿ ರಾಜೇಶ್ವರಿ ವಂದಿಸಿದರು. ಶಿಕ್ಷಕಿ ಸೀಮಾ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಸೆ.14: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

Suddi Udaya
error: Content is protected !!