27.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಂಗಾವಲಾದ ಹಿರಿಯ ವಿದ್ಯಾರ್ಥಿಗಳು

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ಆರ್ಥಿಕವಾಗಿ ಹಿಂದುಳಿದ 26 ವಿದ್ಯಾರ್ಥಿಗಳಿಗೆ 2006ನೇ ಸಾಲಿನ 10ನೇ ತರಗತಿಯ ‘ಸಿ’ ವಿಭಾಗದ 56 ಮಂದಿ ಹಿರಿಯ ವಿದ್ಯಾರ್ಥಿಗಳ ತಂಡವು ಸಮವಸ್ತ್ರಕ್ಕಾಗಿ ಆರ್ಥಿಕ ನೆರವು ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಬೆಂಗಾವಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ. ಸುರೇಶ್ ಅವರು ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಕೈಗೊಂಡಿರುವ ಈ ಸಮಾಜಮುಖಿ ಯೋಜನೆಯನ್ನು ಅಭಿನಂದಿಸಿದರು.

ಹಿರಿಯ ವಿದ್ಯಾರ್ಥಿ ಹಾಗೂ ಬ್ಯಾಂಕ್ ಆಫ್ ಬರೋಡಾದ ಉದ್ಯೋಗಿಯಾಗಿರುವ ಶ್ರೀ ಶಿವಪ್ರಸಾದ್ ಅವರು ಮಾತನಾಡಿ, “ನಾವು ಕಷ್ಟಪಟ್ಟು ಬದುಕಿದ ಹಿಂದಿನ ಜೀವನಕ್ಕೂ ಇಂದಿನ ಜೀವನಶೈಲಿಗೂ ಅಜಗಜಾಂತರ ವ್ಯತ್ಯಾಸವಿದೆ. ನಮ್ಮ ಈ ಏಳಿಗೆಗೆ ನಮ್ಮ ಶಿಕ್ಷಕರು ಹಾಗೂ ಹೆತ್ತವರೇ ಪ್ರಮುಖ ಕಾರಣ” ಎಂದು ಹೇಳಿದರು.

ಇನ್ನೋರ್ವ ಹಿರಿಯ ವಿದ್ಯಾರ್ಥಿ ಹಾಗೂ ಸೆಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ನೆಲ್ಸನ್ ಮಾತನಾಡಿ, “ಹಿರಿಯ ವಿದ್ಯಾರ್ಥಿಗಳ ವತಿಯಿಂದ ಅನೇಕ ಸಮಾಜಮುಖಿ ಯೋಜನೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ. ಇದು ನಮ್ಮ ಮೊದಲ ಯೋಜನೆಯಾಗಿದೆ” ಎಂದು ತಿಳಿಸಿದರು.

ಹಿರಿಯ ವಿದ್ಯಾರ್ಥಿ ಶ್ರೀ ಪ್ರಸಾದ್ ಅವರು ಮಾತನಾಡಿ, “ಒಂದು ಗಿಡವನ್ನು ನೆಟ್ಟು ಅದು ಬೆಳೆದು ಫಲ ನೀಡಲು ಹಲವು ವರ್ಷಗಳ ಕಾಲ ಕಾಯಬೇಕು. ಅದೇ ರೀತಿ ತಂದೆ-ತಾಯಿ ಹಾಗೂ ಶಿಕ್ಷಕರನ್ನು ಗೌರವಿಸಿ, ಅವರ ಮಾರ್ಗದರ್ಶನವನ್ನು ಪಾಲಿಸಿದರೆ ಖಂಡಿತವಾಗಿಯೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾ. ಟಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿಗಳಾದ ಶ್ರೀ ತಾರೇಶ್, ಪ್ರವೀಣ್, ಶ್ರೀ ರಮೇಶ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪರಮೇಶ್ವರ್ ಉಪಸ್ಥಿತರಿದ್ದರು.

10ನೇ ‘ಸಿ’ ತರಗತಿಯ ವಿದ್ಯಾರ್ಥಿನಿಯರು ಪ್ರಾರ್ಥನೆ ನೆರವೇರಿಸಿದರು. ಶಿಕ್ಷಕರಾದ ಶ್ರೀರಾಮ್ ವಂದಿಸಿದರು. ರವೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ ಸದಾನಂದ ಸಾಲಿಯಾನ್ ಬಳಂಜ ಆಯ್ಕೆ

Suddi Udaya
error: Content is protected !!