ಬೆಳ್ತಂಗಡಿ ತಾಲೂಕು ಮಟ್ಟದ ಕೊಕ್ಕಡ ವ್ಯಾಪ್ತಿಯ ಪ್ರಜಾಸೇವಾ ಆಂದೋಲನ ಸಭೆಯು ಸೆ.12ರಂದು ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗ್ಯಾರಂಟಿ ಯೋಜನೆ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಿದರು.
ತಹಸೀಲ್ದಾರ್ ನರಗುಂದ, ಇ ಒ ಭವಾನಿಶಂಕರ್ , ಆರಾಧನಾ ಸಮಿತಿ ಸದಸ್ಯರು, ಗ್ಯಾರಂಟಿ ಯೋಜನೆ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು, ಕೊಕ್ಕಡ ಹೋಬಳಿ ಮಟ್ಟದ ಪಂಚಾಯತ್ ಪಿಡಿಒ ಗಳು, ಕಾರ್ಯದರ್ಶಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.


ಕೊಕ್ಕಡ ಹೋಬಳಿ ಕೇಂದ್ರ ವ್ಯಾಪ್ತಿಯ ಗ್ರಾಮಸ್ಥರು ಇಲಾಖಾಧಿಕಾರಿಗಳಲ್ಲಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿ ಉತ್ತರ ಪಡಕೊಂಡರು. ಕೆಲವರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ನೀಡಿದರು.

ಈ ಸಂದರ್ಭದಲ್ಲಿ ಸುಕನ್ಯಾ ಸಮೃದ್ಧಿ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳಾದ ಅನುಷ್ಕ, ನೇಹಾಕ್ಷಿ, ಸಾಧ್ವಿ, ವಂಶಿಕಾ ನೀಡಲಾಯಿತು. ಕಂದಾಯ ಇಲಾಖೆಯ ಹೇಮಾ ಕಾರ್ಯಕ್ರಮ ನಿರೂಪಿಸಿದರು.












