24.3 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ರಾಜ್ಯಕ್ಕೆ ಕೀರ್ತಿ ತಂದುಕೊಟ್ಟ ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕೆಡೆಟ್: ರಾಷ್ಟ್ರಮಟ್ಟದ ಎನ್.ಸಿ.ಸಿ ಶಿಬಿರಕ್ಕೆ ಜೂನಿಯರ್ ಅಂಡರ್ ಆಫೀಸರ್ ಮಂಜುಷಾ ಆಯ್ಕೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರಿನ ಎನ್.ಸಿ.ಸಿ. ಆರ್ಮಿ ವಿಂಗ್‌ನ ಜೂನಿಯರ್ ಅಂಡರ್ ಆಫೀಸರ್ (JUO) ಮಂಜುಷಾ ಎ. ಜೆ. ಅವರು 18 KAR BN NCC ಘಟಕದ ವತಿಯಿಂದ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎನ್.ಸಿಸಿ ಶಿಬಿರ–2026ಕ್ಕೆ ಫೈರಿಂಗ್ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

ಎನ್.ಸಿ.ಸಿ. ತರಬೇತಿಯಲ್ಲಿ ತೋರಿದ ಶಿಸ್ತು, ಸಮರ್ಪಣೆ, ದೃಢಸಂಕಲ್ಪ ಹಾಗೂ ಕೌಶಲ್ಯದ ಫಲವಾಗಿ ಈ ಪ್ರತಿಷ್ಠಿತ ಶಿಬಿರಕ್ಕೆ ಆಯ್ಕೆಯಾಗಿರುವುದು ಕಾಲೇಜು ಹಾಗೂ ಎನ್.ಸಿ.ಸಿ. ಘಟಕಕ್ಕೆ ಹೆಮ್ಮೆಯ ವಿಷಯವಾಗಿದೆ.

ರಾಷ್ಟ್ರಮಟ್ಟದಲ್ಲಿ ಕಾಲೇಜು ಹಾಗೂ ಎನ್.ಸಿ.ಸಿ.ಯನ್ನು ಪ್ರತಿನಿಧಿಸಲಿರುವ ಜೂನಿಯರ್ ಅಂಡರ್ ಆಫೀಸರ್ ಮಂಜುಷಾ ಅವರ ಸಾಧನೆಯು ಇತರ ಕೆಡೆಟ್‌ಗಳಿಗೆ ಪ್ರೇರಣೆಯಾಗಿದೆ. ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಎನ್.ಸಿ.ಸಿ. ಘಟಕ ಅಭಿನಂದನೆ ಸಲ್ಲಿಸಿ, ಶಿಬಿರದಲ್ಲಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!