30.2 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಶಾಂತಿವನ ಟ್ರಸ್ಟ್ ಕೊಡಮಾಡುವ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಶಾಲಾ ಮಟ್ಟದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಕೊಡಮಾಡುವ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಶಾಲಾ ಮಟ್ಟದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರೌಢಶಾಲೆ ಪುತ್ತಿಲ ಇಲ್ಲಿನ ಮುಖ್ಯೋಪಾಧ್ಯಾಯ ರಾಧಾಕೃಷ್ಣ ತಚ್ಚಮೆ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಜ್ಞಾನ,ಅದನ್ನು ಪಡೆಯುವ ರೀತಿ, ಗುರಿಯನ್ನು ಸಾಧಿಸುವ ರೀತಿ, ಶಾಂತಿವನ ಟ್ರಸ್ಟ್ ಕೊಡಮಾಡುವ ಪುಸ್ತಕದಲ್ಲಿ ಸಿಗುವ ಜೀವನ ಅನುಭವಗಳು,ನೈತಿಕ ಮೌಲ್ಯಾಧಾರಿತ ಶಿಕ್ಷಣದ ಅಗತ್ಯ, ಸ್ನೇಹಿತರ ಆಯ್ಕೆ,ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಉಳಿಸುವ ರೀತಿ ಇತ್ಯಾದಿಗಳನ್ನು ಬಹಳ ಮಾರ್ಮಿಕವಾಗಿ ಹಲವು ಉದಾಹರಣೆಗಳ ಮುಖಾಂತರ ವಿವರಿಸಿದರು.

ನಂತರ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರು ಈ ಪುಸ್ತಕಗಳು ಬದುಕಿಗೆ ಬೇಕಾದ ಎಲ್ಲಾ ವಿಚಾರಗಳನ್ನು ಧಾರೆ ಎರೆದು ಕೊಡುತ್ತಿದೆ. ಗುರಿ ತಲುಪಲು ಹಾದಿ ತೋರಿಸುತ್ತದೆ.ಜೀವನಕ್ಕೆ ಬೇಕಾದ ಎಲ್ಲಾ ಮೌಲ್ಯಗಳನ್ನು ಬೊಗಸೆಯೊಡ್ಡಿ ಕೊಡುತ್ತಿದೆ ಎಂದು ಉದಾಹರಣೆ ಸಹಿತ ವಿವರಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಶ್ರೇಯ ಡಿ. ಪಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ಅನ್ಸಾ ಸ್ವಾಗತಿಸಿ, ಆರುಷ್ ಪಿ ಜೋಶಿ ಅತಿಥಿಗಳ ಕಿರು ಪರಿಚಯ ಮಾಡಿದರು. ಕುಮಾರಿ ಸಿಂಚನ ಧನ್ಯವಾದ ಇತ್ತರು. ಬಳಿಕ ಶ್ಲೋಕ, ಭಾಷಣ, ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ನಡೆಸಿ ಬಹುಮಾನವನ್ನು ನೀಡಲಾಯಿತು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸುರ್ಯ ಸ.ಕಿ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya
error: Content is protected !!