30.2 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಹಾಸಭೆ

ನಾವೂರು : ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ನಾವೂರು ಇದರ ವಾರ್ಷಿಕ ಮಹಾಸಭೆಯನ್ನು ಪುಷ್ಪ ರವರ ಅಧ್ಯಕ್ಷತೆಯಲ್ಲಿ ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಪಶು ಸಖಿ ತುಳಸಿ ಸ್ವಾಗತಿಸಿ ವಲಯ ಮೇಲ್ವಿಚಾರಕರಾದ ಜಯಾನಂದ ಪ್ರಾಸ್ತಾವಿಕವಾಗಿ ಸಂಜೀವಿನಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬನೆ ಜೀವನದ ಬಗ್ಗೆ ಒಕ್ಕೂಟ ರಚನೆಯ ಉದ್ದೇಶ ದ ಬಗ್ಗೆ ಸಂಜೀವಿನಿ ಯೋಜನೆಯ ದ್ಯೇಯೋದ್ದೇಶದ ಬಗ್ಗೆ ಮಾತುಗಳನ್ನಾಡಿದರು . ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಜೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

2025- 26ನೇ ಸಾಲಿನ ಒಕ್ಕೂಟದ ವಾರ್ಷಿಕ ವರದಿಯನ್ನು ಶ್ರೀಮತಿ ಸೇವಿತ ಸಭೆಯಲ್ಲಿ ಮಂಡಿಸಿದರು ವರದಿಯನ್ನು ಚರ್ಚಿಸಿ ಸಭೆಯಿಂದ ಅನುಮೋದನೆ ಪಡೆಯಲಾಯಿತು.


ನಂತರ ಪದಾಧಿಕಾರಿಗಳ ಆಯ್ಕೆ ಪಟ್ಟಿ ನೀಡಲಾಯಿತು. ನಂತರ ಪದಾಧಿಕಾರಿಗಳ ಬದಲಾವಣೆ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕರಾದ ನಡೆಸಿಕೊಟ್ಟರು. ನೂತನ ಪದಾಧಿಕಾರಿಗಳ ಹೂಗುಚ್ಚ ನೀಡಿ ಒಕ್ಕೂಟಕ್ಕೆ ಸ್ವಾಗತಿಸಲಾಯಿತು. ನಂತರ ಸಂಜೀವಿನಿ ಸದಸ್ಯರಿಂದ ಜಯಶ್ರೀ ಮತ್ತು ಪ್ರಸನ್ನ ಒಕ್ಕೂಟ ದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ವಿಜೇತರಿಗೆ ಬಹುಮಾನ ಲೀಲಾವತಿ ಓದಿ ಹೇಳಿದರು ನೀಡಲಾಯಿತು. ಒಕ್ಕೂಟದಲ್ಲಿ ಉತ್ತಮ ಸ್ವಉದ್ಯೋಗ ಮಾಡಿ ಮಾದರಿ ಮಹಿಳೆ ಗುರುತಿಸಿದ ಶ್ರೀಮತಿ ಮಲ್ಲಿಕಾರವರನ್ನು ಸನ್ಮಾನಿಸಲಾಯಿತು. ಸ್ವಚ್ಛತಾ ಸಿಬ್ಬಂದಿ ಇಂದಿರವರನ್ನು ಗೌರವಿಸಲಾಯಿತು. ನಂತರ ಸಭೆಯಲ್ಲಿ ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಮಾತನಾಡಿ ನೂತನ ಪದಾಧಿಕಾರಿಗಳು ಒಕ್ಕೂಟಕ್ಕೆ ನಿಮೆಲ್ಲರ ಸಹಕಾರ ಇದ್ದರೆ ಇನ್ನೂ ಒಳ್ಳೆಯ ರೀತಿಯಲ್ಲಿ ನಡೆಸಿಕೊಂಡು ಹೋಗಬಹುದು ಎಂದು ತಿಳಿಸಿದರು.
ಒಕ್ಕೂಟದ ಅಧ್ಯಕ್ಷರು ಸಿಬ್ಬಂದಿಗಳಿಗೆ ಮತ್ತು ವಲಯ ಮೇಲ್ವಿಚಾರಕರಾದ ಜಯಾನಂದರವರಿಗೆ ಅವರಿಗೂ ಸ್ಮರಣಿಕೆ ನೀಡಿ ಗೌರವಿಸಿದರು. ಪಂಚಾಯತ್ ಸಿಬ್ಬಂದಿಗಳು ಸಹಕಾರ ನೀಡಿರುತ್ತಾರೆ ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು
ಕಾರ್ಯಕ್ರಮವನ್ನು ಜಯಂತಿ ನಿರೂಪಣೆ , ಸೇವಿತ ಧನ್ಯವಾದಗಳು ಸಮರ್ಪಿಸಿದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!