30.2 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ.17 ಲಕ್ಷ ಲಾಭ, ಶೇ.12 ಡಿವಿಡೆಂಟ್ ಘೋಷಣೆ

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 12 ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಏಕತಾ ಸೌಧ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಮಹಾವೀರ ಆರಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಾಲಿನಲ್ಲಿ ರೂ.14 ಕೋಟಿ ವ್ಯವಹಾರ ಮಾಡಿ ರೂ.17 ಲಕ್ಷ ಲಾಭ ಗಳಿಸಿದೆ. ಶೇಕಡ 12 ಡಿವಿಡೆಂಟ್ ಘೋಷಿಸಿದರು. ಸದಸ್ಯರು ಪಡೆದ ಸಾಲವನ್ನು ಸರಿಯಾದ ರೀತಿಯಲ್ಲಿ ಮರುಪಾವತಿ ಮಾಡಿದಲ್ಲಿ ಸಂಘವು ಇನ್ನಷ್ಟು ಲಾಭ ಗಳಿಸಲು ಸಾಧ್ಯ. ಸಂಘದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದರು.

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಶೇ.95ಕ್ಕಿಂತ ಅಧಿಕ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಸನ್ಮಾನಿಸಲಾಯಿತು. ಪಿಗ್ಮಿ ಸಂಗ್ರಹಕರಣನ್ನು ಗೌರವಿಸಲಾಯಿತು.

ನಿರ್ದೇಶಕರಾದ ಕೆ ಗೋಪಾಲ್ ರಾವ್, ದಿನೇಶ್ ಶೆಟ್ಟಿ, ಸಚಿನ್ ಕುಮಾರ್ ಎನ್, ಶರತ್ ಕುಮಾರ್, ಪ್ರಸಾದ್. ಬಿ,
ಬಿ. ಕೃಷ್ಣಪ್ಪ ಗುಡಿಗಾರ, ಕೆ.ಏನ್ ಆನಂದ ಶೆಟ್ಟಿ, ಮಮತಾ ಎಮ್ ಶೆಟ್ಟಿ, ವೀಣಾ ವಿ ಕುಮಾರ್ ಉಪಸ್ಥಿತರಿದ್ದರು.

ನಿರ್ದೇಶಕರಾದ ಸಂತೋಷ್ ಕುಮಾರ್ ಸ್ವಾಗತಿಸಿ. ಉಪಾಧ್ಯಕ್ಷ ತುಕಾರಾಮ ಬಿ.ಧನ್ಯವಾದವಿತ್ತರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ವರದಿ ವಾಚಿಸಿದರು.

Related posts

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya
error: Content is protected !!