ಬೆಳ್ತಂಗಡಿ: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ & ಡೈಮಂಡ್ ಪ್ರಸ್ತುತ ಪಡಿಸುವ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಸೆ. 12ರಂದು ಬೆಳ್ತಂಗಡಿ ರಕ್ಷಾ ಆರ್ಕೆಡ್ ನ ಆವರಣದಲ್ಲಿ ನಡೆಯಿತು.

ಮುಳಿಯ ಗೋಲ್ಡ್ & ಡೈಮಂಡ್ ನ ಮಾರ್ಕೆಟಿಂಗ್ ಮ್ಯಾನೇಜರ್ ಕೃಷ್ಣ ಕುಮಾರ್ ಜೊತೆಯಾಗಿ ಮುದ್ದು ಕೃಷ್ಣ ಸ್ಪರ್ಧೆಗಳು ದೀಪ ಪ್ರಜ್ವಲನೆಗೊಳಿಸಿದರು. ನೂರಕ್ಕೂ ಅಧಿಕ ಕೃಷ್ಣವೇಷ ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.
ವೇದಿಕೆಯಲ್ಲಿ ತೀರ್ಪುಗಾರರಾದ ಪೂಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ಹೇಮಾವತಿ ಕೆ., ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕ ಬೆಳ್ಳಿಯಪ್ಪ, ಶಾಖಾ ಉಪ ವ್ಯವಸ್ಥಾಪಕ ಸುಧೀರ್ ಸುವರ್ಣ ಉಪಸ್ಥಿತರಿದ್ದರು. ಖ್ಯಾತ ನಿರೂಪಕಿ ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮವನ್ನು ನಿರೂಪಿಸಿದರು. ಮುಳಿಯದ ಸಿಬ್ಬಂದಿಗಳು ಸಹಕರಿಸಿದರು.












