September 13, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಉಜಿರೆ: ಮನೋಜ್ ಕುಮಾರ್ ಗಡಿಪಾರು ಅರ್ಜಿ ತಿರಸ್ಕಾರ

ಬೆಳ್ತಂಗಡಿ; ಉಜಿರೆಯ ಮನೋಜ್ ಕುಮಾರ್ ಎಂಬಾತನನ್ನು ಗಡಿಪಾರು ಮಾಡಲು ಬೆಳ್ತಂಗಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ತಿರಸ್ಕರಿಸಿದೆ.

ಮನೋಜ್ ಕುಮಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿದ್ದು ಆತನ ವರ್ತನೆಯಿಂದ‌‌ ಸಾಮಾಜಿಕ‌ ಆಶಾಂತಿಗೆ ಹಾಗೂ ಗಲಭೆಗಳಿಗೆ ಕಾರಣವಾಗಲಿದೆ ಆದ್ದರಿಂದ‌ ಆತನನ್ನು ಬೆಳ್ತಂಗಡಿ ತಾಲೂಕಿನಿಂದ‌ ಗಡಿಪಾರು ಮಾಡುವಂತೆ ಬೆಳ್ತಂಗಡಿ ಪೊಲೀಸ್‌ ನಿರೀಕ್ಷಕರು ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಮನವಿ ಸಲ್ಲಿಸಿದ್ದರು. ಪ್ರಕರಣದ‌ ವಿಚಾರಣೆಯ ವೇಳೆ ಆರೋಪಿ ಪರ ವಾದ‌ಮಂಡಿಸಿದ ವಕೀಲರು ಪೊಲೀಸರ ಆರೋಪಗಳನ್ನು ತಳ್ಳಿಹಾಕಿ ಹತ್ತರಲ್ಲಿ ಐದು ಪ್ರಕರಣಗಳು ಈಗಾಗಲೇ ಖುಲಾಸೆ ಗೊಂಡಿದ್ದು ಐದು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಇತ್ತೀಚೆಗಿನ ಮೂರು ಪ್ರಕರಣಗಳು ಗುರುತರವಾದ ಆರೋಪಗಳದ್ದಲ್ಲ ಎಂದು ವಾದ ಮಂಡಿಸಿದ್ದರು. ವಾದ ಆಲಿಸಿದ ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ಗಡೀಪಾರು ಕೋರಿಕೆಯನ್ನು ತಿರಸ್ಕರಿಸಿದೆ.

ಸದ್ರಿ ಆರೋಪಿಯು ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗದೇ ಸಮಾಜದಲ್ಲಿ ಶಾಂತಿಯನ್ನು ಕದಡುವಂತಹ ಯಾವುದೇ‌ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿ ಮತ್ತು ಅರೋಪಿಯ ಬಗ್ಗೆ ಯಾವುದೇ‌ ತರಹದ ದೂರುಗಳು ಬಂದಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಲು ಅವಕಾಶ ಕಾಯ್ದಿರಿಸುತ್ತಾ, ಸದ್ರಿ ಗಡಿಪಾರು ಪ್ರಸ್ತಾವನೆಯನ್ನು ಈ ಹಂತದಲ್ಲಿಯೇ ತಿರಸ್ಕರಿಸಿ ಆದೇಶ ನೀಡಿದೆ.

Related posts

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಹತ್ತನೇ ಬಾರಿಗೆ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಗೆ ಸಾಧನ ಪ್ರಶಸ್ತಿ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya
error: Content is protected !!