ಬಾರ್ಯ- ಪುತ್ತಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 31ನೇ ವರ್ಷದ ಗಣೇಶೋತ್ಸವದ ಸಾಂಸ್ಕೃತಿಕ ಮತ್ತು ಕ್ರೀಡೋತ್ಸವವನ್ನು ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್ ಮುರುಗೋಳಿ, ಕಾರ್ಯದರ್ಶಿ ದಯಾನಂದ ಆಳ್ವ, ಉಪಾಧ್ಯಕ್ಷ ಲೋಕೇಶ್ ಗೌಡ, ಭಜನಾ ಮಂದಿರದ ಅಧ್ಯಕ್ಷ ಶೇಷಪ್ಪ ಸಾಲಿಯಾನ್, ಕಾರ್ಯದರ್ಶಿ ರಾಮಣ್ಣ ಗೌಡ, ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಶಾಂತ್ ಪೈ, ಯಜ್ಞೇಶ್ ಪುತ್ತಿಲ, ಉಮೇಶ್ ಶೆಟ್ಟಿ, ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.











