ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಸೆ.11ರಂದು ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾ ಮಂಜರಿಯ ಉದ್ಯೋಗ ಪರ್ವದಿಂದ ಆಯ್ದ ಪದ್ಯದ ಗಮಕ ವಾಚನ ಕಾರ್ಯಕ್ರಮ ಜರಗಿತು.
ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಮೇಶ್ ಮಯ್ಯ ಗಮಕ ವಾಚನ ಮಾಡಿದರು. ವಿದ್ಯಾರ್ಥಿಗಳಾದ ಸೃಜನ್ಯ ಮತ್ತು ನೇತ್ರಾವತಿ ವ್ಯಾಖ್ಯಾನ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪ್ರಿತಿಕ್ಷ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕ ಸುಮನ್ ಯು. ಎಸ್ ವಂದಿಸಿದರು.











