30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ರೇಬೀಸ್ ರೋಗದ ಜಾಗೃತಿ ಕಾರ್ಯಕ್ರಮ

ಬೆಳಾಲು: ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ಸೆ.12 ರಂದು ಜರಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ವಲಯ ಪಶು ವೈದ್ಯಕೀಯ ಪರೀಕ್ಷಕರಾದ ಸಚಿನ್ ಮಾತನಾಡಿ ರೇಬೀಸ್ ರೋಗ ಹರಡಲು ಕಾರಣ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪಿಪಿಟಿ ಮತ್ತು ವಿಡಿಯೋ ಪ್ರದರ್ಶನಗಳ ಮೂಲಕ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ, ಬೆಳಾಲು ಗ್ರಾಮದ ಪಶುಸಖಿ ಯಶೋಧ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಭವಿತ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮವನ್ನು ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಸಂಘಟಿಸಲಾಗಿತ್ತು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಬೆಳಾಲು: ಓಡಿಪ್ರೊಟ್ಟು ನಿವಾಸಿ ಉಮಾನಾಥ ಕೋಟ್ಯಾನ್ ನಿಧನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
error: Content is protected !!