30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು-ನಾವೂರು 27 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ವೇ.ಮೂ. ಆನಂದ ಭಟ್‌ರವರ ಪೌರೋಹಿತ್ಯದಲ್ಲಿ 27 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.14ರಂದು ಜರುಗಿತು.

ಉತ್ಸವದ ಉದ್ಘಾಟನೆಯನ್ನು ಭಾರತೀಯ ಗಡಿ ಭದ್ರತಾ ಬಲ ಇನ್ಸ್ ಪೆಕ್ಟರ್ (Retd) Border Security Force, ಮಹೇಶ್ ಕರ್ಕೆರ ತಾರಕೂಟೆಲ್ ಮಾಡಿದರು.
ಮಧ್ಯಾಹ್ನ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸತೀಶ್ ಗೌಡ ಚೌಕದಕಟ್ಟೆ ವಹಿಸಿದ್ದರು. ಧಾರ್ಮಿಕ ಉಪನ್ಯಾಸವನ್ನು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ನಿವೃತ್ತ ಶಾರೀರಿಕ ಶಿಕ್ಷಣ ಶಿಕ್ಷಕರಾದ ರಾಧಾಕೃಷ್ಣ ಅಡ್ಯಂತಾಯ ನೀಡಿದರು.

ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ| ಪ್ರದೀಪ್ ಎ., ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಲಕ್ಷ್ಮಣ ಗೌಡ, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ಹರೀಶ್ ಸಾಲಿಯಾನ್, ಡಾ. ಕಿರಣ್ ಹರಿ, ಕುತ್ರೋಟ್ಟು ಉಲ್ಲಾಕುಲು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಅಡೀಲು, ದೇಜಪ್ಪ ಗೌಡ ಕೆರೆಕೋಡಿ ಉಪಸ್ಥಿತರಿದ್ದರು.

ಸಭಾಭವನ ನಿರ್ಮಾಣಕ್ಕೆ ಪ್ರತೀ ಮನೆಯಿಂದ ಸಹಾಯನಿಧಿ ಸಂಗ್ರಹಿಸುವ ಬಗ್ಗೆ ಕೂಪನ್ ಬಿಡುಗಡೆ ಜರುಗಿತು.

ಗಣೇಶೋತ್ಸವ ಸಮಿತಿ ಕೋಶಾಧಿಕಾರಿ ಸಂತೋಷ್ ಬೆದ್ರಬೆಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು. ಸುಂದರ ಎ. ಇಂದಬೆಟ್ಟು ಧನ್ಯವಾದವಿತ್ತರು.

ಈ ವೇಳೆ ಶಾಸಕ ಹರೀಶ್ ಪೂಂಜ, ಗುರುವಾಯನಕೆರೆ ಎಕ್ಸೆಲ್ ಕಾಲೇಜು ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ, ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬೆಳಿಗ್ಗೆ ನಾವೂರು ಪೇಟೆಯಿಂದ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ವಿಗ್ರಹ ಮೆರವಣಿಗೆ ಮೂಲಕ ತರಲಾಯಿತು. ನಂತರ ಧ್ವಜಾರೋಹಣ, ಉತ್ಸವದ ಉದ್ಘಾಟನೆ, ವಂದೇ ಮಾತರಂ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, 108 ಕಾಯಿ ಗಣಹೋಮ (ಸೇವಾಕರ್ತರು: ಶ್ರೀಮತಿ ರಾಧ ಸತೀಶ್ ಗೌಡ ಮತ್ತು ಮನೆಯವರು ಚೌಕದಕಟ್ಟೆ ಬೆದ್ರಬೆಟ್ಟು ಸುಹನಾ ಐಸ್ ಕ್ರೀಮ್), ನಂತರ ಭಜನಾ ಕಾರ್ಯಕ್ರಮ ಮಧ್ಯಾಹ್ನ ಧಾರ್ಮಿಕ ಸಭೆ, ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅಪರಾಹ್ನ ಭಕ್ತಿಗೀತೆ ಸ್ಪರ್ಧೆ, ಕುಣಿತ ಭಜನಾ ಕಾರ್ಯಕ್ರಮ, ಸಂಜೆ ವಿಸರ್ಜನಾ ಪೂಜೆ, ಪ್ರಸಾದ ವಿತರಣೆ, ಸಂಜೆ ಇಂದಬೆಟ್ಟು ಹಾಗೂ ನಾವೂರು ಗ್ರಾಮದ ಎಲ್ಲಾ ಭಜನಾ ತಂಡಗಳ ನೃತ್ಯ ಭಜನೆಯ ಮೂಲಕ ಶ್ರೀ ಮಹಾಗಣಪತಿ ದೇವರ ವೈಭವದ ಶೋಭಾಯಾತ್ರೆ, ಐಕ್ಯಮಂತ್ರ, ವಿಗ್ರಹ ಜಲಸ್ಥಂಬನ ನಡೆಯಿತು. ಕಾರ್ಯಕ್ರಮದ ಯಶಸ್ವಿಗೆ ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಹಕರಿಸಿದರು.

Related posts

ವಿ.ಹಿಂ.ಪ. ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮುಂಡಾಜೆ ಮಂಜುಶ್ರೀ ಭಜನಾಮಂಡಳಿಯಿಂದ ಧನಸಹಾಯ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya
error: Content is protected !!