ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಇಂಜಿನಿಯರ್ ದಿನಾಚರಣೆ ಪ್ರಯುಕ್ತ ತುಳುಪರ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ತುಳುನಾಡು ಒಕ್ಕೂಟ ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಸಿವಿಲ್ ಇಂಜಿನಿಯರ್ ಶೈಲೇಶ್ ಆರ್ ಜೆ ಇವರನ್ನು ಬೆಳ್ತಂಗಡಿ ವಲಯ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಹಾಗೂ ಜಿಲ್ಲಾ ಸಮಿತಿಯ ಸದಸ್ಯರಾದ ಶಾಂಭವಿ ಪಿ ಬಂಗೇರ, ವಲಯ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ಗಜಾನನ ಟೈಲರ್ ಹಾಗೂ ತಾಲೂಕು ಸಮಿತಿಯ ಉಪಾಧ್ಯಕ್ಷ ವಸಂತ ಸ್ವಾತಿ ಭಾಗವಹಿಸಿದ್ದರು.
ವಸಂತ ಸ್ವಾತಿ ಸ್ವಾಗತಿಸಿದರು. ಶಿವರಾಮ ಹೆಗ್ಡೆ ಧನ್ಯವಾದ ಸಲ್ಲಿಸಿದರು.











