30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಸೆ.15 ರಂದು ನಡೆದಿದೆ.

ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ (56) ಎಂದು ಗುರುತಿಸಲಾಗಿದೆ. ಇವರು ಕಾರ್ಮಿಕರಾಗಿದ್ದು, ತೆಂಗಿನಕಾಯಿ ಕೀಳುವ ಕೆಲಸಕ್ಕಾಗಿ ಕುತ್ರಿಜಾಲಿಗೆ ತೆರಳಿದ್ದರು. ತೆಂಗಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಈ ವೇಳೆ ಸಮೀಪದಲ್ಲಿ ಕಡಿದು ಹಾಕಲಾಗಿದ್ದ ಅಡಕೆ ಮರದ ತುಂಡಿನ ಭಾಗ ನಾರಾಯಣ ಗೌಡ ಅವರ ಮುಖದ ಮೂಲಕ ತಲೆಗೆ ತಾಗಿದ್ದು, ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!