ನಯನಾಡು: ಇಲ್ಲಿಯ ಶ್ರೀ ರಾಮ ಭಜನಾ ಮಂದಿರದಲ್ಲಿ ನಲ್ವತ್ತನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವವವು ವಿಜೃಂಭಣೆಯಿಂದ ನಡೆಯುತ್ತಿದೆ.


ಶ್ರೀ ಗಣೇಶೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭಾಗವಹಿಸಿ, ಶ್ರೀ ಗಣಪತಿ ದೇವರ ದರ್ಶನ ಪಡೆದು ಭಕ್ತರಿಗೆ ಶುಭಾಶಯಗಳನ್ನು ಸಲ್ಲಿಸಿದರು. ಊರ ಗ್ರಾಮಸ್ಥರಿಗೆ, ಅಂಗನವಾಡಿ ಮಕ್ಕಳಿಂದ ಹಿರಿಯರವರೆಗೆ ವಿವಿಧ ಕ್ರೀಡಾಕೂಟಗಳು. ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಯುವಕ ಸಂಘ, ಮಾತೃ ಮಂಡಳಿ, ಭಗಿನಿಯರ ತಂಡದವರು ಯಶಸ್ವಿಗೆ ಸಹಕರಿಸಿದರು. ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮ ಹಾಗೂ ಗಣೇಶೋತ್ಸವದ ಶೋಭಾಯಾತ್ರೆಯು ನಡೆಯಲಿದೆ.












