30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ರೇಬೀಸ್ ರೋಗದ ಜಾಗೃತಿ ಕಾರ್ಯಕ್ರಮ

ಬೆಳಾಲು: ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ಸೆ.12 ರಂದು ಜರಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ವಲಯ ಪಶು ವೈದ್ಯಕೀಯ ಪರೀಕ್ಷಕರಾದ ಸಚಿನ್ ಮಾತನಾಡಿ ರೇಬೀಸ್ ರೋಗ ಹರಡಲು ಕಾರಣ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪಿಪಿಟಿ ಮತ್ತು ವಿಡಿಯೋ ಪ್ರದರ್ಶನಗಳ ಮೂಲಕ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ, ಬೆಳಾಲು ಗ್ರಾಮದ ಪಶುಸಖಿ ಯಶೋಧ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಭವಿತ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮವನ್ನು ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಸಂಘಟಿಸಲಾಗಿತ್ತು.

Related posts

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya
error: Content is protected !!