30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಸೆ.15 ರಂದು ನಡೆದಿದೆ.

ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ (56) ಎಂದು ಗುರುತಿಸಲಾಗಿದೆ. ಇವರು ಕಾರ್ಮಿಕರಾಗಿದ್ದು, ತೆಂಗಿನಕಾಯಿ ಕೀಳುವ ಕೆಲಸಕ್ಕಾಗಿ ಕುತ್ರಿಜಾಲಿಗೆ ತೆರಳಿದ್ದರು. ತೆಂಗಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಈ ವೇಳೆ ಸಮೀಪದಲ್ಲಿ ಕಡಿದು ಹಾಕಲಾಗಿದ್ದ ಅಡಕೆ ಮರದ ತುಂಡಿನ ಭಾಗ ನಾರಾಯಣ ಗೌಡ ಅವರ ಮುಖದ ಮೂಲಕ ತಲೆಗೆ ತಾಗಿದ್ದು, ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya

ಆಳ್ವಾಸ್ ‘ಪುನರ್ಜನ್ಮ’ ಕೇಂದ್ರದ 6ನೇ ವಾರ್ಷಿಕೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya
error: Content is protected !!