30.8 C
ಪುತ್ತೂರು, ಬೆಳ್ತಂಗಡಿ
September 15, 2026
Uncategorized

ಶಿಶಿಲ : ಸೃಷ್ಟಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

ಶಿಶಿಲ : ಸೃಷ್ಟಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ಬೈರಕಟ್ಟ ಇವರ ಅಧ್ಯಕ್ಷತೆಯಲ್ಲಿ ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಒಕ್ಕೂಟದ ಮುಖ್ಯ ಬರಹಗಾರರಾದ ಶಾರದಾ ಗತ ವರ್ಷದ ವರದಿ ವಾಚಿಸಿದರು. ಸಭೆಯಲ್ಲಿ ಭಾಗವಹಿಸಿದ ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾಶ್ರೀಯವರು ಸಂಜೀವಿನಿ ಕಾರ್ಯಕ್ರಮದ ಸಮಗ್ರ ಮಾಹಿತಿಯನ್ನು ನೀಡಿ ನೂತನ ಪದಾಧಿಕಾರಿಗಳ ಪದಗ್ರಹಣವನ್ನು ನಡೆಸಿಕೊಟ್ಟು ಶುಭ ಹಾರೈಸಿದರು.

ಮಹಾಸಭೆಯ ಪ್ರಯುಕ್ತ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರು ಹಾಗೂ ಅತ್ಯುತ್ತಮ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಒಕ್ಕೂಟದ ವತಿಯಿಂದ PMJJBY ಯಡಿಯಲ್ಲಿ ವಿಮೆ ಹೊಂದಿದ್ದು ಮೃತಹೊಂದಿದ ಸಂಜೀವಿನಿ ಸಂಘದ ಸದಸ್ಯೆಯ ಕುಟುಂಬದ ಸದಸ್ಯರಿಗೆ ವಿಮಾ ಮೊತ್ತವನ್ನು ಬ್ಯಾಂಕ್ ಆಫ್ ಬರೋಡಾ ಅಧಿಕಾರಿ ರಮೇಶ್ ಹಸ್ತಾಂತರಿಸಿದರು. ನಿರ್ಗಮನ ಪದಾಧಿಕಾರಿಗಳನ್ನು ವಲಯ ಮೇಲ್ವಿಚಾರಕರನ್ನು , ಸಿಬ್ಬಂದಿವರ್ಗದವರನ್ನು ಹಾಗೂ ಸಹಕರಿಸಿದವರನ್ನು ಗೌರವಿಸಲಾಯಿತು.
ಮಹಾಸಭೆಯ ಅಂಗವಾಗಿ ಒಕ್ಕೂಟದ ಸದಸ್ಯೆಯರ ಉತ್ಪನ್ನಗಳ ವಿಶೇಷ ಹಳ್ಳಿ ಸಂತೆ ಆಯೋಜಿಸಲಾಗಿತ್ತು.

ಸ್ವಾತಿ ಸೂರಜ್ ಪ್ರಾರ್ಥಿಸಿದರು. ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ ಸಂಧ್ಯಾ ಸ್ವಾಗತಿಸಿದರು. ಪಶುಸಖಿ ಆಶಿಕಾ ಧನ್ಯವಾದಗೈದರು. ಕೃಷಿ ಸಖಿ ಸುಮಾ ಸಂಜಯ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆಯಲ್ಲಿ ಸರಣಿ ಅಪಘಾತ: ಹಲವು ವಾಹನಗಳು ಜಖಂ

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

Suddi Udaya
error: Content is protected !!