September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರಿಯ ಮೊಗೇರ ಕುಟುಂಬಕ್ಕೆ ಜಯಪ್ರಕಾಶ ಕನ್ಯಾಡಿಯವರಿಂದ ಮಾಸಿಕ ಅಕ್ಕಿ ವಾಗ್ದಾನ; ಆರಂಭಿಕ 50 ಕೆ.ಜಿ ಅಕ್ಕಿ ಹಸ್ತಾಂತರ

ಬೆಳ್ತಂಗಡಿ; ಲಾಯಿಲ ಗ್ರಾಮದ ಪ್ರಗತಿನಗರ ನಿವಾಸಿ ಕರಿಯ ಮೊಗೇರ ಕುಟುಂಬದ ಸಂಕಷ್ಟ ಮನಗಂಡು
ದ.ಕ ಜಿಲ್ಲಾ ಮೊಗೇರ ಸಂಘದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕನ್ಯಾಡಿಯವರು ಅವರಿಗೆ ಮಾಸಿಕ ಅಕ್ಕಿ ನೀಡಲು ನಿರ್ಧರಿಸಿದ್ದು, ಆರಂಭಿಕ ಮಾಸದ 50 ಕೆ.ಜಿ ಅಕ್ಕಿಯನ್ನು ಸೆ.15 ರಂದು ಕುಟುಂಬಕ್ಕೆ ಹಸ್ತಾಂತರಿಸಿದರು.

ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಸಿ.ಕೆ ಚಂದ್ರಕಲಾ ಅವರ ಮನವಿಗೆ ಸ್ಪಂದಿಸಿದ ಜಯಪ್ರಕಾಶ್ ಅವರು ಈ ಕೊಡುಗೆ ನೀಡಿದರು.

ಜಯಪ್ರಕಾಶ್ ಕನ್ಯಾಡಿಯವರು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಉದ್ಯೋಗಿಯಾಗಿದ್ದು, ಈಗಾಗಲೇ
ವಿವಿಧ ಸಂಘಟನೆಗಳ ಮೂಲಕ ಅನಾರೋಗ್ಯ ಪೀಡಿತರಿಗೆ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಹಾಗೂ ಅಶಕ್ತರಿಗೆ ಆಶ್ರಯ ಕಲ್ಪಿಸುವಲ್ಲಿ ಮಾದರಿಯಾಗಿ ಶ್ರಮಿಸುತ್ತಿದ್ದಾರೆ‌. ತನ್ನ ಪುತ್ರ ಮಧ್ವೀರ್ ಅವರ ಹೆಸರಿನಲ್ಲಿ ಈ ಸೇವೆ ಮಾಡುತ್ತಿದ್ದಾರೆ‌. ಇದಕ್ಕೆ ಅವರ ಪತ್ನಿ ಕವಿತಾ ಜೈನ್‌ಪೇಟೆ ಬೆಂಬಲವಾಗಿದ್ದಾರೆ.

Related posts

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya
error: Content is protected !!