ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಪ್ರವಾಸಿಗರಿಗೆ ಸೆ.17 ರಿಂದ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
ಮಳೆಗಾಲದಲ್ಲಿ ಕಲ್ಲುಗಳು ಜಾರುವ ಕಾರಣ ಪ್ರವೇಶ ನಿಷೇಧ ಹೇರಲಾಗಿತ್ತು ಬೇಸಿಗೆ ಕಾಲದಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಜೂ.೧ ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಂಡು ಮೊದಲ ವಾರಾಂತ್ಯದ ರವಿವಾರ ಜೂ.7ರಂದು1000ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ವೀಕ್ಷಿಸಿ ಇತಿಹಾಸ ನಿರ್ಮಾಣವಾಗಿತ್ತು. ಜೂ. 1ರಿಂದ ಪ್ರವಾಸಿಗರ ವಿಕ್ಷಣೇಗೆ ಮುಕ್ತಗೊಂಡಿದ್ದ ಗಡಾಯಿಕಲ್ಲಿನಲ್ಲಿ ಜೂ.14ಕ್ಕೆ ಮತ್ತೊಮ್ಮೆ ಪ್ರವಾಸಿಗರ ವಿಕ್ಷಣಗೆ ನಿಷೇಧ ಹೇರಲಾಗಿತ್ತು ಇದಾದ ಬಳಿಕ ನಿರಂತರ ಜೋರು ಮಳೆ ಸುರಿದ ಕಾರಣ ಜು.8 ರಿಂದ ಮತ್ತೆ ಪ್ರವೇಶಕ್ಕೆ ನಿಷೇಧ ಹೇರಿ ಮುಂದುವರಿದಿದ್ದು ನಾಳೆಯಿಂದ ವೀಕ್ಷಣೆಗೆ ತೆರೆದುಕೊಂಡಿದೆ. ಒಂದು ದಿನದಲ್ಲಿ 500 ಮಂದಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪೂರ್ವ ನೋಂದವಣಿ ಕಡ್ಡಾಯವಾಗಿದೆ.











