September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರುಣೋದಯ ಕುಣಿತ ಭಜನಾ ಮಂಡಳಿಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನ ವಿತರಣೆ

ಬೆಳ್ತಂಗಡಿ: ಅರುಣೋದಯ ಭಜನಾ ಮಂದಿರ ಬಡೆಕೊಟ್ಟು ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ನಡೆದ ಸಮಾರಂಭದಲ್ಲಿ ಅರುಣೋದಯ ಕುಣಿತ ಭಜನಾ ಮಂಡಳಿಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನ ನೀಡಲಾಯಿತು.

ವಿಷ್ಣುಮೂರ್ತಿ ದೇವಸ್ಥಾನ ಇಳಿಯೂರು ಇದರ ಅರ್ಚಕರಾದ ಸುಧೀಂದ್ರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.. ಭಜನಾ ಮಂದಿರದ ಅಧ್ಯಕ್ಷ ಲೋಕೇಶ್ ಅಗಚ್ಚರಿ ಕೊಡಿ ಅಧ್ಯಕ್ಷತೆಯನ್ನು ವಹಿಸಿದರು. ಭಜನಾ ಮಂಡಳಿಯ ವಿದ್ಯಾರ್ಥಿಗಳಿಗೆ ಭಜನಾ ತಂಡದ ಗುರುಗಳಾದ ಸಂದೇಶ್ ಮದ್ದಡ್ಕ ಇವರು ಸಮವಸ್ತ್ರವನ್ನು ವಿತರಿಸಿದರು.

ಭಜನಾ ಮಂದಿರದ ಸ್ಥಾಪಕ ಅಧ್ಯಕ್ಷ ಕೇಶವ ಪೂಜಾರಿ ಮಜಲು ವಿದ್ಯಾರ್ಥಿ ವೇತನವನ್ನು ವಿತರಿಸಿದರು. ವೇದಿಕೆಯಲ್ಲಿ
ಮಣಿನಾಲ್ಕೂರು ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕಟದಡೆ, ಭಜನಾ ಗುರುಗಳಾದ ಆಕಾಶ್, ಗುರುವಾಯನಕೆರೆ ಹಿರಿಯರಾದ ವಾಸು ಪೂಜಾರಿ ಮಜಲು, ಮಹಿಳಾ ಮಂಡಳದ ಅಧ್ಯಕ್ಷೆ ಚಂದ್ರಿಕಾ ಮಜಲು ರಾಮ ನಲ್ಕೆ, ಭಜನಾ ಮಂಡಳಿಯ ಮೇಲುಸ್ತುವಾರಿಯಾದ ಹೊನ್ನಪ್ಪ ಪೂಜಾರಿ ಮುದಲಾಡಿ, ಸವಿತಾ ಬಾರೈತಿಯಾರು, ಆಶಾ ಬತ್ತನಾಡಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ನೀತಾ ಬತ್ತನಾಡಿ ನಿರೂಪಿಸಿದರು.

Related posts

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮರೋಡಿ ಪೊಸರಡ್ಕ ಕ್ಷೇತ್ರಕ್ಕೆ ದೇಣಿಗೆ ಹಸ್ತಾಂತರ

Suddi Udaya

ಗುಂಡೂರಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya
error: Content is protected !!