September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸೆ. 15 ರಂದು ಕಾಲೇಜಿನಲ್ಲಿ ಅವರ ಸ್ಮರಣಾರ್ಥ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ ಉದ್ಘಾಟಿಸಿ ಮಾತನಾಡಿದರು, ಸರ್ ಎಂ. ವಿಶ್ವೇಶ್ವರಯ್ಯನವರು ಕೇವಲ ಒಬ್ಬ ಶ್ರೇಷ್ಠ ಇಂಜಿನಿಯರ್ ಮತ್ತು ಆಡಳಿತಗಾರರಷ್ಟೇ ಅಲ್ಲದೆ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಐತಿಹಾಸಿಕ ಕೊಡುಗೆ ನೀಡಿದ ಮಹಾನ್ ದೇಶಭಕ್ತರಾಗಿದ್ದಾರೆ. ಅವರ ಬುದ್ಧಿಶಕ್ತಿ ಮತ್ತು ಪ್ರಾಮಾಣಿಕತೆ ಅಪಾರವಾಗಿತ್ತು. ಮೈಸೂರಿನ ಕೃಷ್ಣರಾಜಸಾಗರ ಅಣೆಕಟ್ಟು ಅವರ ಅದ್ಭುತ ತಾಂತ್ರಿಕ ಜ್ಞಾನಕ್ಕೆ ಸಾಕ್ಷಿಯಾಗಿದೆ ಅವರು ಮೈಸೂರು ಸಂಸ್ಥಾನದ ದಿವಾನರಾಗಿದ್ದ ಅವಧಿಯಲ್ಲಿ ಕನ್ನಡ ಸಾಹಿತ್ಯ ಲೋಕಕ್ಕೆ ಸಿಕ್ಕ ಪ್ರೋತ್ಸಾಹ ಅನನ್ಯವಾದುದು. ಎಂದರು.

ಅವರಂತೆ ಸಮಾಜದ ಸಮಸ್ಯೆಗಳಿಗೆ ತಾಂತ್ರಿಕ ಪರಿಹಾರಗಳನ್ನು ಕಂಡುಕೊಂಡಾಗ ಮಾತ್ರ ನಮ್ಮ ಶಿಕ್ಷಣಕ್ಕೆ ನಿಜವಾದ ಸಾರ್ಥಕತೆ ಸಿಗುತ್ತದೆ. ದೇಶದ ಪ್ರಗತಿಯು ಕೇವಲ ಇಟ್ಟಿಗೆ-ಸಿಮೆಂಟ್‌ಗಳಿಂದ ಆಗುವುದಿಲ್ಲ, ಅದು ಯುವಕರ ದೇಶಪ್ರೇಮ, ಪರಿಶ್ರಮಾ ತ್ಯಾಗ, ಮತ್ತು ಸೃಜನಶೀಲತೆಯಿಂದ ನಿರ್ಮಾಣವಾಗುತ್ತದೆ ಎಂದು ನುಡಿದರು..

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಸಹಪ್ರಾಧ್ಯಾಪಕ ಡಾ. ರಾಜಶೇಖರ ಹಳೆಮನೆ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿದರು.

ಆಧುನಿಕ ಕರ್ನಾಟಕ ನಿರ್ಮಾತ್ರಗಳಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರು ಮುಂಚೂಣಿಯಲ್ಲಿ ಇರುವವರು. ಅವರ ಆಲೋಚನೆ ಚಿಂತನೆಗಳಿಂದ ಕರ್ನಾಟಕ ಪ್ರಗತಿ ಕಂಡಿದೆ. ಅವರ ರೂಪಿಸಿದ ಕೈಗಾರಿಕೆ ನೀರಾವರಿ ಬ್ಯಾಂಕು ಸಾರಿಗೆ ಮುಂತಾದ ಯೋಜನೆಗಳು ಕನ್ನಡ ನಾಡು ವಿಕಾಸ ಒಂದನ್ನು ಸಹಕಾರಿಯಾಯಿತು. ಅವರ ಪ್ರಾಮಾಣಿಕತೆ, ಇಂದಿನ ಯುವ ಸಮುದಾಯಕ್ಕೆ ಅಧಿಕಾರಿಗಳಿಗೆ ಅತ್ಯಂತ ದೊಡ್ಡ ಪಾಠ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಲ್ಲಿನ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿದರು..

ಕಾರ್ಯಕ್ರಮವನ್ನು ಕಾಲೇಜಿನ ಕಲಾ ವಿಭಾಗದ ಡೀನ್ ಮತ್ತು ಕನ್ನಡ ವಿಭಾಗ ಮುಖ್ಯಸ್ಥೆ ಡಾ. ಬೊಜ್ಜಮ್ಮ ಕೆ ಎನ್ ಸ್ವಾಗತಿಸಿ, ತೃತೀಯ ಐಚ್ಚಿಕ ಕನ್ನಡ ವಿದ್ಯಾರ್ಥಿಗಳಾದ ನಿಶ್ಮಿತ ವಂದಿಸಿ, ವಿಂಧ್ಯ ನಿರೂಪಿಸಿದರು.

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆರ್ಥಿಕ ಸಹಾಯಧನ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!