September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯುವ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟಕ ಬದಲಾವಣೆ “ಶೋಭಾಜಿ” ಬದಲು “ಅಧ್ಯಕ್ಷೆರ್” ಪ್ರದರ್ಶನ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ವತಿಯಿಂದ ಸಮಾಜ ಮಂದಿರದಲ್ಲಿ ಆಯೋಜಿಸಿರುವ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟಕ ಬದಲಾವಣೆ ಮಾಡಲಾಗಿದೆ.

ನಾಳೆ (ಸೆ.17) ಪ್ರದರ್ಶನಗೊಳ್ಳಬೇಕಿದ್ದ “ಶೋಭಾಜಿ” ನಾಟಕದ ಪ್ರಮುಖ ಕಲಾವಿದೆ ಅಪಘಾತಕ್ಕೊಳಗಾದ ಕಾರಣ ಅನಿವಾರ್ಯವಾಗಿ “ಶೋಭಾಜಿ” ನಾಟಕವನ್ನು ರದ್ದುಗೊಳಿಸಲಾಗಿದೆ.

ಅದರ ಬದಲು 200ಕ್ಕೂ ಅಧಿಕ ಪ್ರದರ್ಶನ ಕಂಡು ಎಲ್ಲೆಡೆ ಕಲಾಭಿಮಾನಿಗಳ ಮೆಚ್ಚುಗೆ ಪಡೆದ ಯಶಸ್ವಿ ನಾಟಕ “ಅಧ್ಯಕ್ಷೆರ್” ನಾಟಕವನ್ನು ಪ್ರದರ್ಶಿಸಲಾಗುವುದು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಕಲಾಭಿಮಾನಿಗಳು ಈ ಅನಿವಾರ್ಯ ಸ್ಥಿತಿಯನ್ನು ಅರ್ಥಮಾಡಿಕೊಂಡು ನಾಳಿನ ಪ್ರದರ್ಶನಕ್ಕೆ ಆಗಮಿಸಿ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕಾಗಿ ಸಮಿತಿ ವಿನಂತಿಸಿದೆ.

Related posts

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ತಣ್ಣೀರುಪಂತ: ಕುದ್ರಡ್ಕ ನಿವಾಸಿ ಗಿರಿಜಾ ನಿಧನ

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya
error: Content is protected !!