September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರಿಯ ಮೊಗೇರ ಕುಟುಂಬಕ್ಕೆ ಜಯಪ್ರಕಾಶ ಕನ್ಯಾಡಿಯವರಿಂದ ಮಾಸಿಕ ಅಕ್ಕಿ ವಾಗ್ದಾನ; ಆರಂಭಿಕ 50 ಕೆ.ಜಿ ಅಕ್ಕಿ ಹಸ್ತಾಂತರ

ಬೆಳ್ತಂಗಡಿ; ಲಾಯಿಲ ಗ್ರಾಮದ ಪ್ರಗತಿನಗರ ನಿವಾಸಿ ಕರಿಯ ಮೊಗೇರ ಕುಟುಂಬದ ಸಂಕಷ್ಟ ಮನಗಂಡು
ದ.ಕ ಜಿಲ್ಲಾ ಮೊಗೇರ ಸಂಘದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕನ್ಯಾಡಿಯವರು ಅವರಿಗೆ ಮಾಸಿಕ ಅಕ್ಕಿ ನೀಡಲು ನಿರ್ಧರಿಸಿದ್ದು, ಆರಂಭಿಕ ಮಾಸದ 50 ಕೆ.ಜಿ ಅಕ್ಕಿಯನ್ನು ಸೆ.15 ರಂದು ಕುಟುಂಬಕ್ಕೆ ಹಸ್ತಾಂತರಿಸಿದರು.

ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಸಿ.ಕೆ ಚಂದ್ರಕಲಾ ಅವರ ಮನವಿಗೆ ಸ್ಪಂದಿಸಿದ ಜಯಪ್ರಕಾಶ್ ಅವರು ಈ ಕೊಡುಗೆ ನೀಡಿದರು.

ಜಯಪ್ರಕಾಶ್ ಕನ್ಯಾಡಿಯವರು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಉದ್ಯೋಗಿಯಾಗಿದ್ದು, ಈಗಾಗಲೇ
ವಿವಿಧ ಸಂಘಟನೆಗಳ ಮೂಲಕ ಅನಾರೋಗ್ಯ ಪೀಡಿತರಿಗೆ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಹಾಗೂ ಅಶಕ್ತರಿಗೆ ಆಶ್ರಯ ಕಲ್ಪಿಸುವಲ್ಲಿ ಮಾದರಿಯಾಗಿ ಶ್ರಮಿಸುತ್ತಿದ್ದಾರೆ‌. ತನ್ನ ಪುತ್ರ ಮಧ್ವೀರ್ ಅವರ ಹೆಸರಿನಲ್ಲಿ ಈ ಸೇವೆ ಮಾಡುತ್ತಿದ್ದಾರೆ‌. ಇದಕ್ಕೆ ಅವರ ಪತ್ನಿ ಕವಿತಾ ಜೈನ್‌ಪೇಟೆ ಬೆಂಬಲವಾಗಿದ್ದಾರೆ.

Related posts

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್ : ಉಜಿರೆಯ ಎಸ್.ಡಿ.ಎಂ ಗೆ ಅವಳಿ ಪ್ರಶಸ್ತಿ

Suddi Udaya
error: Content is protected !!