ಚಾರ್ಮಾಡಿ: ಇಲ್ಲಿಯ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ 2025 -26 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಜಯಂತಿ ಇವರ ಅಧ್ಯಕ್ಷತೆಯಲ್ಲಿ ಮತ್ತು ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಮಹಾ ಸಭೆಯನ್ನು ನಡೆಸಲಾಯಿತು.
ಸಂಜೀವಿನಿ ಧ್ಯೇಯ ಗೀತೆಯೊಂದಿಗೆ ಪ್ರಾರಂಭಿಸಿ, ಎಲ್ ಸಿ ಆರ್ ಪಿ ರಮ್ಯಾ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಜೋಸೆಫ್. ಪಿ. ಎಸ್ ಕಾರ್ಯಕ್ರಮಕ್ಕೆ ದ್ವೀಪ ಪ್ರಜ್ವಲನೆಯ ಮೂಲಕ ಉದ್ಯುಕ್ತ ಚಾಲನೆಯನ್ನು ನೀಡಿ, ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಒಕ್ಕೂಟದ ಕಾರ್ಯದರ್ಶಿ ದಿವ್ಯ ವಾರ್ಷಿಕ ವರದಿಯನ್ನು ಮಂಡಿಸಿ ಅನುಮೋದನೆಯನ್ನು ಪಡೆಯಲಾಯಿತು . ಮುಖ್ಯಪುಸ್ತಕ ಬರಹಗಾರರಾದ ಭವ್ಯ 2025-26 ನೇ ಸಾಲಿನ ಲೆಕ್ಕಪರಿಶೋಧನ ವರದಿಯನ್ನು ಮಂಡಿಸಿ, ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕಾರದ ಜಯಾನಂದ್ , ಒಕ್ಕೂಟದ ಜವಾಬ್ದಾರಿ, ಗುರಿ ಮತ್ತು ಉದ್ದೇಶಗಳ ಕುರಿತಾಗಿ ವಿವರವಾದ ಮಾಹಿತಿಯನ್ನು ನೀಡಿದರು. ನಂತರದಲ್ಲಿ ಪದಾಧಿಕಾರಿಗಳ ಪದಗ್ರಹಣವನ್ನು ನಡೆಸಲಾಯಿತು. ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣೆಕೆಯನ್ನು ನೀಡಿ ಗೌರವಿಸಲಾಯಿತು. ಮತ್ತು ನೂತನ ಪದಾಧಿಕಾರಿಗಳಿಗೆ ಅಭಿನಂದಿಸಲಾಯಿತು. ಒಕ್ಕೂಟದ ಎಲ್ಲಾ ಸಿಬ್ಬಂದಿಗಳನ್ನು ಅಭಿನಂದಿಸಲಾಯಿತು. ನಿರ್ಗಮಿತ ಅಧ್ಯಕ್ಷರು, ಉಪಾಧ್ಯಕ್ಷರು ಕಾರ್ಯದರ್ಶಿ, ಜತೆ ಕಾರ್ಯದರ್ಶಿ ಕೋಶಾಧಿಕಾರಿ, ಆಯ್ಕೆಯಾದ ನೂತನ ಅಧ್ಯಕ್ಷರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಎಂಬಿಕೆ ಭವ್ಯ ಧನ್ಯವಾದವಿತ್ತರು.











