September 16, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ರಿಗೆ ಕೆಡಿಪಿ ಸದಸ್ಯರಿಂದ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೆಡಿಪಿ (KDP) ಸದಸ್ಯರು ಸೆ.16ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಯು. ಟಿ. ಖಾದರ್ ಅವರನ್ನು ಭೇಟಿಯಾಗಿ ಜಿಲ್ಲೆಯ ಪ್ರಮುಖ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.

ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದ.ಕ. ಜಿಲ್ಲೆಗೆ ಸಂಬಂಧಿಸಿದಂತೆ ಕೆಳಗಿನ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿ, ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸುವಂತೆ ಸಚಿವರಿಗೆ ವಿನಂತಿಸಲಾಯಿತು.

•ನಮೂನೆ 9 ಮತ್ತು 11 ರ ಸಮಸ್ಯೆ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಫಾರಂ 9 ಮತ್ತು 11 ರ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವುದು. •ಗಣಿಗಾರಿಕೆ ವಿಚಾರ: ಜಿಲ್ಲೆಯಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಎದುರಾಗಿರುವ ತೊಡಕುಗಳನ್ನು ಬಗೆಹರಿಸುವುದು. •ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದು.

ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಮೆಲ್ವಿನ್ ಡಿಸೋಜ, ಸಂತೋಷ್ ಕುಮಾರ್ ಲಾಯಿಲ, ಹಾಗೂ ಹಮೀದ್ ಕಿನ್ಯ ಅವರು ಉಪಸ್ಥಿತರಿದ್ದರು.

Related posts

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya
error: Content is protected !!