September 16, 2026
ಗ್ರಾಮಾಂತರ ಸುದ್ದಿ

ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ಇಂಜಿನಿಯರ್ಸ್ ದಿನಾಚರಣೆ

ಬೆಳಾಲು :
ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನದ ಪ್ರಯುಕ್ತ ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಸೆ.14 ರಂದು ಇಂಜಿನಿಯರ್ಸ್ ದಿನಾಚರಣೆ ಆಚರಿಸಲಾಯಿತು.


ಸರ್ ಎಂ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಇಂಜಿನಿಯರ್ಸ್ ದಿನಾಚರಣೆಯ ಕುರಿತ ಭಿತ್ತಿ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ ದೇಶದ ಅಭಿವೃದ್ಧಿಗೆ, ನಿರ್ಮಾಣ ರಂಗಕ್ಕೆ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯನವರು ನೀಡಿದ ಕೊಡುಗೆಯನ್ನು ಸ್ಮರಿಸಿದರು‌.
ವಿದ್ಯಾರ್ಥಿನಿ ಶರಾವತಿ ದಿನ ವಿಶೇಷದ ಕುರಿತು ಮಾತನಾಡಿದರು.
ಸರ್ ಎಂ. ವಿಶ್ವೇಶ್ವರಯ್ಯನವರ ವಿಡಿಯೋ ತುಣುಕು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೃಜನ್ಯ ಕಾರ್ಯಕ್ರಮ ನಿರೂಪಿಸಿದರು‌.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!