September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

(ಸೆ.17) ನಾಳೆಯಿಂದ ಗಡಾಯಿಕಲ್ಲು ಚಾರಣಕ್ಕೆ ಅವಕಾಶ

ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಪ್ರವಾಸಿಗರಿಗೆ ಸೆ.17 ರಿಂದ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

ಮಳೆಗಾಲದಲ್ಲಿ ಕಲ್ಲುಗಳು ಜಾರುವ ಕಾರಣ ಪ್ರವೇಶ ನಿಷೇಧ ಹೇರಲಾಗಿತ್ತು ಬೇಸಿಗೆ ಕಾಲದಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಜೂ.೧ ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಂಡು ಮೊದಲ ವಾರಾಂತ್ಯದ ರವಿವಾರ ಜೂ.7ರಂದು1000ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ವೀಕ್ಷಿಸಿ ಇತಿಹಾಸ ನಿರ್ಮಾಣವಾಗಿತ್ತು. ಜೂ. 1ರಿಂದ ಪ್ರವಾಸಿಗರ ವಿಕ್ಷಣೇಗೆ ಮುಕ್ತಗೊಂಡಿದ್ದ ಗಡಾಯಿಕಲ್ಲಿನಲ್ಲಿ ಜೂ.14ಕ್ಕೆ ಮತ್ತೊಮ್ಮೆ ಪ್ರವಾಸಿಗರ ವಿಕ್ಷಣಗೆ ನಿಷೇಧ ಹೇರಲಾಗಿತ್ತು ಇದಾದ ಬಳಿಕ ನಿರಂತರ ಜೋರು ಮಳೆ ಸುರಿದ ಕಾರಣ ಜು.8 ರಿಂದ ಮತ್ತೆ ಪ್ರವೇಶಕ್ಕೆ ನಿಷೇಧ ಹೇರಿ ಮುಂದುವರಿದಿದ್ದು ನಾಳೆಯಿಂದ ವೀಕ್ಷಣೆಗೆ ತೆರೆದುಕೊಂಡಿದೆ. ಒಂದು ದಿನದಲ್ಲಿ 500 ಮಂದಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪೂರ್ವ ನೋಂದವಣಿ ಕಡ್ಡಾಯವಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya
error: Content is protected !!