September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಉಜಿರೆ ಸಿಟಿ -777 ಜೇಸಿ ಸಪ್ತಾಹ 2026 ಸಮಾರೋಪ ಸಮಾರಂಭ ಮತ್ತು ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

ಉಜಿರೆ : ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಏಳು ದಿನಗಳ 777 ಜೇಸಿ ಸಪ್ತಾಹ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು.

ವಲಯ 15ರ ವಲಯ ವ್ಯವಸ್ಥಾಪಕ ನಿರ್ದೇಶಕರಾದ ಸುಹಾಸ್ ಮರಿಕೆ ಇವರಿಂದ ಉದ್ಘಾಟನೆಗೊಂಡ ಸಪ್ತಾಹ ಕಾರ್ಯಕ್ರಮವು ಸಾರ್ವಜನಿಕರಿಗೆ ಸ್ಟೀಲ್ ಬಾಟಲ್ ವಿತರಣೆ ಮತ್ತು ಪ್ಲಾಸ್ಟಿಕ್ ತ್ಯಜಿಸಿ ಜಾಗೃತಿ ಕಾರ್ಯಕ್ರಮ, ಯುವಧ್ವನಿ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಮಾನವ ಕರ್ತವ್ಯ ಮತ್ತು ಡಿಜಿಟಲ್ ವ್ಯಾಪ್ತಿ ಕಾರ್ಯಕ್ರಮ, ವ್ಯವಹಾರ ಅಭಿವೃದ್ಧಿ ಕಾರ್ಯಕ್ರಮ,ಜೆಸಿಐ ಪ್ರಮೋಷನ್ ಕಾರ್ಯಕ್ರಮ, ಜೆಸಿ ಸದಸ್ಯರ ಕುಟುಂಬ ಬಾಂಧವ್ಯ ಕಾರ್ಯಕ್ರಮ, ಹೊರಾಂಗಣ ಸಂಚಾರವೇ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿ ಸಪ್ತಾಹದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ನಡ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷ ಮಹಮ್ಮದ್ ಮಿರ್ಷಾದ್ ಎಲ್ಲರನ್ನು ಸ್ವಾಗತಿಸಿದರು.
ನಡ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಜೆಸಿಐ ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಉಪನ್ಯಾಸಕಿ ಶಿಲ್ಪ, ಕನ್ನಡ ಭಾಷೆ ಉಪನ್ಯಾಸಕಿ ವಸಂತಿ ಉಪಸ್ಥಿತರಿದ್ದರು.

ಸಾಧಕರಿಗೆ ಗೌರವಾರ್ಪಣೆ
ಸಮಾರಂಭದ ಕಾರ್ಯಕ್ರಮದಲ್ಲಿ ಪ್ರಮಾಣಿಕೃತ ಕೌಶಲ್ಯಾಭಿವೃದ್ಧಿ ತರಬೇತಿದಾರರು, ಪ್ರವೃತ್ತಿಯಲ್ಲಿ ಕಲಾವಿದರು, ವೃತ್ತಿಯಲ್ಲಿ ಎಸ್‍ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ಸಂಪತ್ ಕುಮಾರ್ ಇವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಗೌರವಾರ್ಪಣೆ ನೀಡಿ ಅಭಿನಂದಿಸಲಾಯಿತು.


ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಜೆಸಿ ವಾಣಿಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಭವ್ಯಶ್ರೀ ಕೀರ್ತಿರಾಜ್ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಜೆಸಿ ಸದಸ್ಯರು, ಕಾಲೇಜಿನ ಉಪನ್ಯಾಸಕ ವೃಂದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya
error: Content is protected !!