September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಬ್ಯಾಂಕಿಂಗ್ ಹಾಗೂ ಕೌಶಲ್ಯ ತರಬೇತಿ ಮಾಹಿತಿ ಶಿಬಿರ

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಸುನಿಧಿ ಫೌಂಡೇಷನ್ ಟ್ರಸ್ಟ್ ಹಾಗೂ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಇವರ ಜಂಟಿ ಆಶ್ರಯದಲ್ಲಿ ಕೌಶಲ್ಯ ತರಬೇತಿ ಹಾಗೂ ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ ಶಿಬಿರ ಬೆಳ್ತಂಗಡಿ ಅಂಬೇಡ್ಕರ ಭವನದಲ್ಲಿ ನಡೆಯಿತು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಇವರು ” ಮಹಿಳೆಯರಿಗೆ ಕೌಶಲ್ಯ ತರಬೇತಿ ಹಾಗೂ ಬ್ಯಾಂಕಿಂಗ್ ಮಾಹಿತಿ ಇಂದಿನ ಕಾಲದಲ್ಲಿ ಅವಶ್ಯವಾಗಿದ್ದು, ಹೆಚ್ಚಿನ ಮಹಿಳೆಯರು ಇದರ ಪ್ರಯೋಜನ ಪಡೆಯಬೇಕು” ಎಂದು ಕರೆ ನೀಡಿದರು.

ಮಂಗಳೂರಿನ ಗೌತಮ್ ಇವರು ಬ್ಯಾಂಕಿಂಗ್ ಸಾಲ ಸೌಲಭ್ಯ , ಕೃಷಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೀನಾಕ್ಷಿ ಇವರು ಆರಿ ಕೌಶಲ್ಯ ತರಬೇತಿ ಯೊಜನೆ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ವಿನೀತ್, KSTA ಬೆಳ್ತಂಗಡಿ ವಲಯದ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ವಲಯ ಸಮಿತಿ ಉಪಾಧ್ಯಕ್ಷ ಹರೀಶ್ ಹರ್ಷ, ತಾಲೂಕು ಸಮಿತಿ ಉಪಾಧ್ಯಕ್ಷ ವಸಂತ ಸ್ವಾತಿ, ಮಾಜಿ ವಲಯ ಸಮಿತಿ ಅಧ್ಯಕ್ಷ ಹರೀಶ್ ಗಜಾನನ
ತರಗತಿಯಲ್ಲಿ ಭಾಗವಹಿಸುವ 47 ಮಂದಿ ಭಾಗವಹಿಸಿದರು . ಜಿ.ವಿ. ಹರೀಶ್ ನಿರೂಪಿಸಿ, ಸುರೇಖಾ ಸ್ವಾಗತಿಸಿದರು. ಶ್ರೀಮತಿ ಶಶಿಕಲಾ ಧನ್ಯವಾದಗೈದರು.

Related posts

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya
error: Content is protected !!