ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ವಿಸ್ತರಣೆ ಕಾಮಗಾರಿ ಹಿನ್ನಲೆಯಲ್ಲಿ ಬೆಳ್ತಂಗಡಿಯ ಮುಖ್ಯ ರಸ್ತೆಯ ಬಳಿಯ ಕಟ್ಟಡವೊಂದನ್ನು ಕೆಡವುತ್ತಿರುವ ಸಂದರ್ಭದಲ್ಲಿ ಗೋಡೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.
ಕಡಬ ನಿವಾಸಿ ಜುಬೇರ್ ಎಂಬ ಕಾರ್ಮಿಕ ಮೃತಪಟ್ಟ ವ್ಯಕ್ತಿಯಾಗಿದ್ದರೆ. ಬೆಳ್ತಂಗಡಿ ಮಾದರಿ ಶಾಲಾ ಬಳಿಯ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಇದ್ದ ಕಟ್ಟಡವನ್ನು ಕೆಡವುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಕಟ್ಟಡವನ್ನು ಕಂಪ್ರೆಶರ್ ಬಳಸಿ ಕೆವುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಗೋಡೆ ಬಿದ್ದಿದ್ದು, ಗಾಯಗೊಂಡ ಜುಬೇರ್ ಅವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಮೃತಪಟ್ಟರೆನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಾಗಿದೆ.











