September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ವತಿಯಿಂದ ಶಿವಪ್ರಸಾದ್ ಪುರೋಹಿತ್ ಸವಣಾಲು ಇವರ ಪೌರೋಹಿತ್ಯದಲ್ಲಿ ಶ್ರೀ ವಿಶ್ವಕರ್ಮಯಜ್ಞ ಮತ್ತು ಪೂಜೆಯು ಸೆ.17ರಂದು ಬೆಳ್ತಂಗಡಿ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ವಹಿಸಿದ್ದರು. ಶಿವಪ್ರಸಾದ್ ಮಲೆಬೆಟ್ಟು ಧಾರ್ಮಿಕ ಉಪನ್ಯಾಸವನ್ನು ನೀಡಿದರು.

ಮುಖ್ಯ ಅತಿಥಿ ಶಾಸಕ ಹರೀಶ್ ಪೂಂಜ ಅವರು ದೀಪ ಪ್ರಜ್ವಲಿಸಿ ಮಾತನಾಡಿ, ಹಿಂದೂ ಸಮಾಜಕ್ಕೆ ಶಕ್ತಿ ತುಂಬುವವರು ವಿಶ್ವಕರ್ಮ ಬಾಂಧವರು. ವಿಶ್ವಕರ್ಮರ ಕೈಚಳಕದಿಂದ ಮೂಡಿದ ವಸ್ತುಗಳು ದೇವರ ಕೈಯಲ್ಲಿ ಆಯುಧವಾಗಿ ಶೋಭಿಸುತ್ತದೆ. ನನ್ನ ಮುಂದಿನ ಕೆಲಸ ಕಾರ್ಯಗಳಿಗೂ ನಿಮ್ಮ ಆಶೀರ್ವಾದ ಇರಲಿ ಎಂದರು.

ಮುಖ್ಯ ಅತಿಥಿಗಳಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ದಿವಾಕರ ಆಚಾರ್ಯ, ಪ್ರಸನ್ನ ಯು ಆಚಾರ್ಯ, ಸಹಾಯಕ ಸರ್ಕಾರಿ ಅಭಿಯೋಜಕಿ ಶೋಭಾ ಎಸ್., ಭಾಗವಹಿಸಿದರು. ರುಕ್ಮಯ ಆಚಾರ್ಯ ಕನ್ನಾಜೆ, ರಾಧಾಕೃಷ್ಣ ಆಚಾರ್ಯ, ಪುರುಷೋತ್ತಮ ಆಚಾರ್ಯ, ಲಕ್ಷ್ಮೀ ತಾರನಾಥ್, ಉಷಾ ಹರಿಪ್ರಸಾದ್, ರಮೇಶ್ ಆಚಾರ್ಯ, ಸುಬ್ರಹ್ಮಣ್ಯ ಆಚಾರ್, ಶಿಲ್ಪಿಗಳಾದ ಜಯಚಂದ್ರ ಆಚಾರ್ಯ ನಾಳ, ರಾಜೇಶ್ ಆಚಾರ್ಯ ಗೇರುಕಟ್ಟೆ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ವಿಶ್ವಕರ್ಮಾಭ್ಯುದಯ ಸಭಾದ ಕಾರ್ಯದರ್ಶಿ ರಾಮ್ ಪ್ರಸಾದ್ ಎನ್. ಎಸ್ ಗುಂಪಲಾಜೆ ಪ್ರಸ್ತಾವಿಸಿ, ಸ್ವಾಗತಿಸಿದರು. ರಾಜೇಶ್ ಆಚಾರ್ಯ ಸವಣಾಲು ಮತ್ತು ಲತಾ ಬಾಲಚಂದ್ರ ಆಚಾರ್ಯ ನಿರೂಪಿಸಿ ಸಂಘಟನಾ ಕಾರ್ಯದರ್ಶಿ ಬಿಕೆ ಸಂತೋಷ್ ಆಚಾರ್ಯ ವಂದಿಸಿದರು.

ಮಧ್ಯಾಹ್ನ ನಂತರ “ವಿ.ಎಸ್.ಡಿ ಶೋ ಮಾಸ್ಟರ್ಸ್ ಉಜಿರೆ ಮತ್ತು “ಸ್ವರ ಮಾಧುರ್ಯ ಬೆಳ್ತಂಗಡಿ” ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿಶ್ವಕರ್ಮ ಟ್ಯಾಲೆಂಟ್ ಶೋ–2026 ಪಿಲ್ಮಿ ನೃತ್ಯ ಸ್ಪರ್ಧೆ, ಸೋಲೋ ನೃತ್ಯ ನಡೆಯಿತು.

Related posts

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!